ಮೈಸೂರು

ಹಾಸನ ಪೆನ್‌ಡ್ರೈವ್‌ ಪ್ರಕರಣ; ಸಂತ್ರಸ್ತೆಯರಲ್ಲಿ ಶೇ.80 ರಷ್ಟು ಒಕ್ಕಲಿಗರು: ಎಂ.ಲಕ್ಷ್ಮಣ್‌

ಮೈಸೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದ ಸಂತ್ರಸ್ತೆಯರಲ್ಲಿ ಶೇ.80 ರಷ್ಟು ಮಹಿಳೆಯರು ಒಕ್ಕಲಿಗರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್‌ ಹೇಳಿದ್ದಾರೆ.

ಮೈಸೂರು ನಗರ ಕಾಂಗ್ರೆಸ್‌ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೊದಲು ದೇವರಾಜೇಗೌಡರನ್ನು ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯಾಸತ್ಯತೆ ಹೊರಬರಲಿದೆ ಎಂದರು.

ಪ್ರಜ್ವಲ್ ರೇವಣ್ಣ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಅವರ ಲೈಂಗಿಕ ಹಗರಣ ಕುರಿತು ತನಿಖೆ ನಡೆಸಬೇಕಾ ಅಥವಾ ಬೇಡವೇ ಎನ್ನುವುದನ್ನು ಜಾ.ದಳ- ಬಿಜೆಪಿ ನಾಯಕರು ಸಾರ್ವಜನಿಕವಾಗಿ ಹೇಳಲಿ ಎಂದು ಸವಾಲು ಹಾಕಿದ ಲಕ್ಷ್ಮಣ್‌, ವಿಡಿಯೋ ಮಾಡಿದ್ದು ಪ್ರಜ್ವಲ್‌, ವಿಡಿಯೋ ತೆಗೆದುಕೊಂಡಿದ್ದು ಕಾರ್ತಿಕ್, ಊರವರಿಗೆ ಹಂಚಿದ್ದು ದೇವರಾಜೇಗೌಡ. ಇದರಲ್ಲಿ ಸಿಎಂ ಹಾಗೂ ಡಿಸಿಎಂ ಅವರ ಪಾತ್ರ ಏನು ಇಲ್ಲ. ಆದರೂ ಸಿಎಂ ಹಾಗೂ ಡಿಸಿಎಂ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲೂ ಕೂಡ ಬಿಜೆಪಿ-ಜೆಡಿಎಸ್ ರಾಜಕೀಯವಾಗಿ ಬಳಸುವ ವ್ಯವಸ್ಥಿತ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು.

ಒಕ್ಕಲಿಗ ನಾಯಕರಾಗಿ ಬೆಳೆಯುತ್ತಿರುವ ಡಿಕೆ ಶಿವಕುಮಾರ್‌ ಅವರನ್ನು ತುಳಿಯಲು ಸುಳ್ಳು ಸುದ್ದಿ ಹಬ್ಬಿಸಿ ಪ್ರಕರಣದ ದಾರಿ ತಪ್ಪಿಸಲಾಗುತ್ತಿದೆ. ಇದರಲ್ಲಿ ಡಿಕೆಶಿ ಪಾತ್ರವಿಲ್ಲ. ಈಗಾತಾನೇ ಎಸ್‌ಐಟಿ ತನಿಖೆ ಆರಂಭಿಸಿದೆ. ಆರಂಭದಲ್ಲೇ ಸರಿಯಿಲ್ಲ ಎಂದು ಹೇಳುವ ಮೂಲಕ ಮೈತ್ರಿ ನಾಯಕರು ಪ್ರಕರಣದ ದಿಕ್ಕು ತಪ್ಪುಸುತ್ತಿದ್ದಾರೆ ಎಂದು ದೂರಿದರು.

ಎಚ್.ಡಿ. ಕುಮಾರಸ್ವಾಮಿ ಅವರಿಗೆ ಎಸ್‌ಐಟಿ ಮೇಲೆ ನಂಬಿಕೆ ಇಲ್ಲದಿದ್ದರೆ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ತಮ್ಮ ಮೈತ್ರಿ ಪಕ್ಷದವರನ್ನು ಒತ್ತಾಯಿಸಲಿ. ಪ್ರಜ್ವಲ್‌ ಕೆಲವೇ ನಿಮಿಷದಲ್ಲಿ ರಾಜತಾಂತ್ರಿಕ ಪಾಸ್‌ ಕೊಟ್ಟು ವಿದೇಶಕ್ಕೇ ಹೋಗಲು ದಾರಿಮಾಡಿಕೊಟ್ಟವರು ಯಾರು? ಈ ಪ್ರಕರಣದಲ್ಲಿ ನರೇಂದ್ರ ಮೋದಿ, ಅಮಿತ್ ಶಾ ಡಬಲ್ ಸ್ಟ್ಯಾಂಟ್ ತೆಗೆದುಕೊಳ್ಳುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾಗೆ ಪ್ರಜ್ವಲ್ ಹುಡುಕುವುದು ಕಷ್ಟವೇ ಎಂದು ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಪ್ರಧಾನ ಕಾರ್ಯದರ್ಶಿಗಳಾದ ಎಂ. ಶಿವಣ್ಣ, ಭಾಸ್ಕರ್ ಎಲ್.ಗೌಡ, ರಘು, ಗಿರೀಶ್, ರಘು ಗೌಡ, ರಾಮಚಂದ್ರ,‌ ವಕ್ತಾರ ಕೆ. ಮಹೇಶ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

16 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

16 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

16 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

16 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

16 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

16 hours ago