ಮೈಸೂರು

ವಿಧಾನ ಪರಿಷತ್‌ ಚುನಾವಣೆ: ಯತೀಂದ್ರ ಪರ ಬ್ಯಾಟಿಂಗ್‌ ಮಾಡಿದ ಎಚ್‌.ಸಿ ಮಹದೇವಪ್ಪ

ಮೈಸೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲಾಗುವುದು ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಅವರು ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟಿಂಗ್‌ ಮಾಡಿದ್ದಾರೆ.

ಈ ಸಂಬಂದ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ವಿಧಾನ ಪರಿಷತ್‌ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರ ಪರವಾಗಿ ಹೈಕಮಾಂಡ್‌ ತೀರ್ಮಾನ ಕೈಗೊಳ್ಳಲಿದೆ. ನಮ್ಮದೇ ಸರ್ಕಾರ ಇರುವ ಕಾರಣ ವಿಧಾನ ಪರಿಷತ್‌ಗೆ ಲಾಭಿ ಹೆಚ್ಚಾಗಲಿದೆ. ಪರಿಷತ್‌ ಚುನಾವಣೆಯಲ್ಲಿ ಯಾವಾಗಲೂ ಲಾಭಿ ಇದ್ದೇ ಇರುತ್ತದೆ ಎಂದು ಎಚ್‌.ಸಿ ಮಹದೇವಪ್ಪ ಹೇಳಿದರು.

ಇನ್ನು ಈ ಬಾರಿಯ ವಿಧಾನ ಪರಿಷತ್‌ ಚುನಾವಣೆಯನ್ನು ನಾವು ಗೆದ್ದೇ ಗೆಲ್ಲುತ್ತೇವೆ. ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ನಮಗೆ ಯಾವುದೇ ಹಿನ್ನಡೆಯಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2023ರ ವಿಧಾನ ಸಭೆ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರನ್ನು ಕಣದಿಂದ ದೂರ ಸರಿಸಿ ಅವರ ತಂದೆ ಸಿದ್ದರಾಮಯ್ಯ ಅವರು ಸ್ಪರ್ಧಿಸಿದ್ದರು. ಇನ್ನು ಈ ಸಂಬಂಧ ಅವರ ತಂದೆಗಾಗಿ ತಮ್ಮ ಕ್ಷೇತ್ರವನ್ನೇ ಯತೀಂದ್ರ ಬಿಟ್ಟುಕೊಟ್ಟಿದ್ದರು. ಹೈಕಮಾಂಡ್‌ ಆಜ್ಞೆಯಂತೆ ಕ್ಷೇತ್ರ ಬಿಟ್ಟುಕೊಟ್ಟ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮುಂದಿನ ದಿನಗಳಲ್ಲಿ ನೆರವಾಗುವುದಾಗಿ ಕಾಂಗ್ರೆಸ್‌ ಹೈ ಕಮಾಂಡ್‌ ಹೇಳಿತ್ತು. ಅದರಂತೆ ಈಗ ಎಂಎಲ್‌ಸಿ ಭಾಗ್ಯ ಸಿಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

2 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

2 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

2 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

2 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

2 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

2 hours ago