ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಜಲದರ್ಶನಿ ಅತಿಥಿಗೃಹದಲ್ಲಿ ಇಂದು ಮೈಸೂರು ಹಾಗೂ ಚಾಮರಾಜನಗರ ಭಾಗದ ಕಬ್ಬು ಬೆಳೆಗಾರರೊಂದಿಗೆ ಶನಿವಾರ (ಜು.27) ಸಭೆ ನಡೆಸಿ ಅವರ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಸಚಿವರು, ರೈತರ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಅದರಂತೆ ಕಬ್ಬುಬೆಳೆಗಾರರ ಹಿತದೃಷ್ಟಿಯಿಂದ ಸಭೆಯಲ್ಲಿ ತಿಳಿಸಿರುವ ಬೇಡಿಕೆಗಳಿಗೆ ಸರ್ಕಾರವು ಪ್ರಮಾಣಿಕವಾಗಿ ಸ್ಪಂದಿಸುವ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದರು.
ಕೆ.ಆರ್.ನಗರದ ಶ್ರೀರಾಮ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ಕುರಿತು ಮಾತನಾಡಿ, ಸರ್ಕಾರ ಹಾಗೂ ಸಂಸ್ಥೆ ನಡುವ ಒಡಂಬಡಿಕೆಯಾಗಿರುವುದು ಕಾರ್ಖಾನೆ ಪ್ರಾರಂಭಿಸಿ ಕಬ್ಬು ಬೆಳೆಯುವ ರೈತರಿಗೆ ಅನುಕೂಲ ಮಾಡಿಕೊಡುವುದಾಗಿದೆ. ಕಾರ್ಖಾನೆ ಪ್ರಾರಂಭಿಸದ ಬಗ್ಗೆ ಸಂಬಂಧಿಸಿದವರೊಟ್ಟಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಅಚ್ಚುಕಟ್ಟು ಪ್ರದೇಶದಲ್ಲಿರುವ ಎಲ್ಲಾ ರೈತರ ಜಮೀನಿಗೆ ನೀರು ತಲುಪಿಸಲು ನೀರಾವರಿ ಯೋಜನೆ ರೂಪಿಸಲಾಗಿದೆ. ಈ ನಡುವೆ ನಾಲೆಗಳಿಂದ ಮೋಟಾರ್ ಮೂಲಕ ನೀರು ಪಡೆಯುವವರ ಮೇಲೆ ಕ್ರಮ ಜರುಗಿಸಲಾಗುತ್ತಿರುವ ಬಗ್ಗೆ ದೂರು ಬರುತ್ತಿದ್ದು, ಇದರ ಮಾರ್ಪಾಡಿಗೆ ರೈತರು ನೀಡುವ ಸಲಹೆಗಳನ್ನು ಸರ್ಕಾರ ಪರಿಗಣಿಸಲಿದೆ ಎಂದರು.
ಬ್ಯಾಂಕುಗಳಲ್ಲಿ ರೈತರಿಗೆ ಅಸಹಕಾರ ನೀಡುತ್ತಿದ್ದಾರೆ ಎಂಬ ರೈತರ ಮಾತಿಗೆ ಪ್ರತಿಕ್ರಿಯಿಸಿದ ಸಚಿವರು, ಶೀಘ್ರದಲ್ಲೇ ಬ್ಯಾಂಕ್ ಅಧಿಕಾರಿಗಳನ್ನು ಸಭೆಕರೆದು ಚರ್ಚಿಸಿ ರೈತರನ್ನು ಶೋಷಣೆ ಮಾಡದಂತೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ರೈತರು ತಾವು ಬೆಳೆದ ಬೆಳೆ ಸಾಗಿಸಲು ಅನುಕೂಲವಾಗುವ ‘ನಮ್ಮ ಹೊಲ, ನಮ್ಮ ರಸ್ತೆಯನ್ನು’ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಜನರು ಕೂಡ ಪ್ರಜಾಪ್ರಭುತ್ವದ ಪ್ರಮುಖ ವೇದಿಕೆಯಾದ ಗ್ರಾಮಸಭೆಗಳಲ್ಲಿ ಭಾಗವಹಿಸಿ ಗ್ರಾಮಕ್ಕೆ ಅಗತ್ಯವಿರುವ ಮೂಲಸೌಕರ್ಯದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಅಧೀಕ್ಷರಾದ ಸೀಮಾ ಲಾಟ್ಕರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ರೈತಸಂಘದ ಮುಖಂಡರು ಉಪಸ್ಥಿತರಿದ್ದರು.
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…
ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…
ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಷ್ಟು…
ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…
ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ…