ಮೈಸೂರು: ವಾಡಿಕೆಗಿಂತ ಈ ಬಾರಿ ಶೇಕಡ 75 ರಷ್ಟು ಹೆಚ್ಚು ಮಳೆ ಸುರಿದಿದ್ದು ಬೊಕ್ಕಹಳ್ಳಿ ಗ್ರಾಮಕ್ಕೆ ಹೆಚ್ಚು ನೀರು ನುಗ್ಗಿದೆ, ಗ್ರಾಮಸ್ಥರು ಗ್ರಾಮದ ಸ್ಥಳಾಂತರಕ್ಕೆ ಒತ್ತಾಯಿಸುತಿದ್ದು ಅಂತಹ ಸಂದರ್ಭ ಸೃಷ್ಟಿಯಾಗಿಲ್ಲ. ಅದರೂ ಗ್ರಾಮಸ್ಥರ ಮನವಿ ಮೇರೆಗೆ ಸರ್ಕಾರಿ ಜಾಗದ ಲಭ್ಯತೆಯ ಆಧಾರದಂತೆ ಗ್ರಾಮ ಸ್ಥಳಾಂತರಿಸಲು ಪರಿಶೀಲಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅಭಿಪ್ರಾಯಿಸಿದರು.
ಶನಿವಾರ (ಆ.03) ನಂಜನಗೂಡು ತಾಲ್ಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಅವರ ಜತೆಗೂಡಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಕಾಳಜಿ ಕೇಂದ್ರದಲ್ಲಿನ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಬಾರಿ ಹೊಳೆಯಿಂದ 80 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಬಂದುದರಿಂದ ಗ್ರಾಮದ ಕೆಲ ಜಮೀನುಗಳು ಮುಳುಗಡೆಯಾಗಿ, ಕೆಲ ಮನೆಗಳಿಗೆ ಭಾಗಶಃ ಹಾನಿಯಾಗಿದೆ. 80 ಮನೆಗಳಿಗೆ ನೀರು ನುಗ್ಗಿದ್ದು, 215 ಜನರನ್ನು ಸ್ಥಳಾಂತರಿಸಲಾಗಿದೆ. 78 ಜನ ಕಾಳಜಿ ಕೇಂದ್ರದಲ್ಲಿ ಉಳಿದಿದ್ದಾರೆ. ಜಿಲ್ಲಾಡಳಿತ ತಗ್ಗಿನ ಪ್ರದೇಶದ ಮನೆಗಳವರಿಗೆ ಜಾಗೃತಿ ಮೂಡಿಸುವುದರೊಂದಿಗೆ ಊಟ,ವಸತಿಗಳೊಂದಿಗೆ ಸಮರ್ಪಕ ವ್ಯವಸ್ಥೆಗಳನ್ನು ಕಲ್ಪಿಸಿದೆ ಎಂದರು.
ಒಟ್ಟಾರೆ ಜಿಲ್ಲೆಯಲ್ಲಿ 345 ಮನೆಗಳಿಗೆ ಹಾನಿಯಾಗಿದ್ದು, 256 ಮನೆಗಳಿಗೆ ಪರಿಹಾರ ನೀಡಲಾಗಿದೆ, 268 ಮನೆಗಳು ಭಾಗಶಃ ಹಾನಿಯಾಗಿವೆ ಇವುಗಳಿಗೆ ಎನ್.ಡಿ.ಆರ್.ಎಫ್ ನಿಯಮಾವಳಿಯಂತೆ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ 220 ಶಾಲೆಗಳು,60 ಅಂಗನವಾಡಿ ಕೇಂದ್ರಗಳು, 40 ರಿಂದ 50 ಕಿಮೀ ಗ್ರಾಮೀಣ ರಸ್ತೆ, 25 ಕಿಮೀ ಪಿಡ್ಲೂಡಿ ರಸ್ತೆ ಹಾಳಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಯತೀಂದ್ರ, ಜಿಲ್ಲಾಧಿಕಾರಿ ಲಕ್ಷೀಕಾಂತ ರೆಡ್ಡಿ, ಜಿ.ಪಂ.ಸಿಇಒ ಕೆ.ಎಂ.ಗಾಯತ್ರಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…