ಮೈಸೂರು

ಸರ್ಕಾರಿ ಜಾಗ ಸಿಕ್ಕರೆ ಬೊಕ್ಕಹಳ್ಳಿ ಗ್ರಾಮ ಸ್ಥಳಾಂತರಕ್ಕೆ ಚಿಂತನೆ: ಎಚ್‌ಸಿ ಮಹದೇವಪ್ಪ

ಮೈಸೂರು: ವಾಡಿಕೆಗಿಂತ ಈ ಬಾರಿ ಶೇಕಡ 75 ರಷ್ಟು ಹೆಚ್ಚು ಮಳೆ ಸುರಿದಿದ್ದು ಬೊಕ್ಕಹಳ್ಳಿ ಗ್ರಾಮಕ್ಕೆ ಹೆಚ್ಚು ನೀರು ನುಗ್ಗಿದೆ, ಗ್ರಾಮಸ್ಥರು ಗ್ರಾಮದ ಸ್ಥಳಾಂತರಕ್ಕೆ ಒತ್ತಾಯಿಸುತಿದ್ದು ಅಂತಹ ಸಂದರ್ಭ ಸೃಷ್ಟಿಯಾಗಿಲ್ಲ. ಅದರೂ ಗ್ರಾಮಸ್ಥರ ಮನವಿ ಮೇರೆಗೆ ಸರ್ಕಾರಿ ಜಾಗದ ಲಭ್ಯತೆಯ ಆಧಾರದಂತೆ ಗ್ರಾಮ ಸ್ಥಳಾಂತರಿಸಲು ಪರಿಶೀಲಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅಭಿಪ್ರಾಯಿಸಿದರು.

ಶನಿವಾರ (ಆ.03) ನಂಜನಗೂಡು ತಾಲ್ಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಅವರ ಜತೆಗೂಡಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಕಾಳಜಿ ಕೇಂದ್ರದಲ್ಲಿನ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಬಾರಿ ಹೊಳೆಯಿಂದ 80 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಬಂದುದರಿಂದ ಗ್ರಾಮದ ಕೆಲ ಜಮೀನುಗಳು ಮುಳುಗಡೆಯಾಗಿ, ಕೆಲ ಮನೆಗಳಿಗೆ ಭಾಗಶಃ ಹಾನಿಯಾಗಿದೆ. 80 ಮನೆಗಳಿಗೆ ನೀರು ನುಗ್ಗಿದ್ದು, 215 ಜನರನ್ನು ಸ್ಥಳಾಂತರಿಸಲಾಗಿದೆ. 78 ಜನ ಕಾಳಜಿ ಕೇಂದ್ರದಲ್ಲಿ ಉಳಿದಿದ್ದಾರೆ. ಜಿಲ್ಲಾಡಳಿತ ತಗ್ಗಿನ ಪ್ರದೇಶದ ಮನೆಗಳವರಿಗೆ ಜಾಗೃತಿ ಮೂಡಿಸುವುದರೊಂದಿಗೆ ಊಟ,ವಸತಿಗಳೊಂದಿಗೆ ಸಮರ್ಪಕ ವ್ಯವಸ್ಥೆಗಳನ್ನು ಕಲ್ಪಿಸಿದೆ ಎಂದರು.

ಒಟ್ಟಾರೆ ಜಿಲ್ಲೆಯಲ್ಲಿ 345 ಮನೆಗಳಿಗೆ ಹಾನಿಯಾಗಿದ್ದು, 256 ಮನೆಗಳಿಗೆ ಪರಿಹಾರ ನೀಡಲಾಗಿದೆ, 268 ಮನೆಗಳು ಭಾಗಶಃ ಹಾನಿಯಾಗಿವೆ ಇವುಗಳಿಗೆ ಎನ್.ಡಿ.ಆರ್.ಎಫ್ ನಿಯಮಾವಳಿಯಂತೆ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ 220 ಶಾಲೆಗಳು,60 ಅಂಗನವಾಡಿ‌ ಕೇಂದ್ರಗಳು, 40 ರಿಂದ 50 ಕಿಮೀ ಗ್ರಾಮೀಣ ರಸ್ತೆ, 25 ಕಿಮೀ ಪಿಡ್ಲೂಡಿ ರಸ್ತೆ ಹಾಳಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಯತೀಂದ್ರ, ಜಿಲ್ಲಾಧಿಕಾರಿ ಲಕ್ಷೀಕಾಂತ ರೆಡ್ಡಿ, ಜಿ.ಪಂ.ಸಿಇಒ ಕೆ.ಎಂ.ಗಾಯತ್ರಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

4 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

14 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago