ಮೈಸೂರು: ವಾಡಿಕೆಗಿಂತ ಈ ಬಾರಿ ಶೇಕಡ 75 ರಷ್ಟು ಹೆಚ್ಚು ಮಳೆ ಸುರಿದಿದ್ದು ಬೊಕ್ಕಹಳ್ಳಿ ಗ್ರಾಮಕ್ಕೆ ಹೆಚ್ಚು ನೀರು ನುಗ್ಗಿದೆ, ಗ್ರಾಮಸ್ಥರು ಗ್ರಾಮದ ಸ್ಥಳಾಂತರಕ್ಕೆ ಒತ್ತಾಯಿಸುತಿದ್ದು ಅಂತಹ ಸಂದರ್ಭ ಸೃಷ್ಟಿಯಾಗಿಲ್ಲ. ಅದರೂ ಗ್ರಾಮಸ್ಥರ ಮನವಿ ಮೇರೆಗೆ ಸರ್ಕಾರಿ ಜಾಗದ ಲಭ್ಯತೆಯ ಆಧಾರದಂತೆ ಗ್ರಾಮ ಸ್ಥಳಾಂತರಿಸಲು ಪರಿಶೀಲಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅಭಿಪ್ರಾಯಿಸಿದರು.
ಶನಿವಾರ (ಆ.03) ನಂಜನಗೂಡು ತಾಲ್ಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಅವರ ಜತೆಗೂಡಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಕಾಳಜಿ ಕೇಂದ್ರದಲ್ಲಿನ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಬಾರಿ ಹೊಳೆಯಿಂದ 80 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಬಂದುದರಿಂದ ಗ್ರಾಮದ ಕೆಲ ಜಮೀನುಗಳು ಮುಳುಗಡೆಯಾಗಿ, ಕೆಲ ಮನೆಗಳಿಗೆ ಭಾಗಶಃ ಹಾನಿಯಾಗಿದೆ. 80 ಮನೆಗಳಿಗೆ ನೀರು ನುಗ್ಗಿದ್ದು, 215 ಜನರನ್ನು ಸ್ಥಳಾಂತರಿಸಲಾಗಿದೆ. 78 ಜನ ಕಾಳಜಿ ಕೇಂದ್ರದಲ್ಲಿ ಉಳಿದಿದ್ದಾರೆ. ಜಿಲ್ಲಾಡಳಿತ ತಗ್ಗಿನ ಪ್ರದೇಶದ ಮನೆಗಳವರಿಗೆ ಜಾಗೃತಿ ಮೂಡಿಸುವುದರೊಂದಿಗೆ ಊಟ,ವಸತಿಗಳೊಂದಿಗೆ ಸಮರ್ಪಕ ವ್ಯವಸ್ಥೆಗಳನ್ನು ಕಲ್ಪಿಸಿದೆ ಎಂದರು.
ಒಟ್ಟಾರೆ ಜಿಲ್ಲೆಯಲ್ಲಿ 345 ಮನೆಗಳಿಗೆ ಹಾನಿಯಾಗಿದ್ದು, 256 ಮನೆಗಳಿಗೆ ಪರಿಹಾರ ನೀಡಲಾಗಿದೆ, 268 ಮನೆಗಳು ಭಾಗಶಃ ಹಾನಿಯಾಗಿವೆ ಇವುಗಳಿಗೆ ಎನ್.ಡಿ.ಆರ್.ಎಫ್ ನಿಯಮಾವಳಿಯಂತೆ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ 220 ಶಾಲೆಗಳು,60 ಅಂಗನವಾಡಿ ಕೇಂದ್ರಗಳು, 40 ರಿಂದ 50 ಕಿಮೀ ಗ್ರಾಮೀಣ ರಸ್ತೆ, 25 ಕಿಮೀ ಪಿಡ್ಲೂಡಿ ರಸ್ತೆ ಹಾಳಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಯತೀಂದ್ರ, ಜಿಲ್ಲಾಧಿಕಾರಿ ಲಕ್ಷೀಕಾಂತ ರೆಡ್ಡಿ, ಜಿ.ಪಂ.ಸಿಇಒ ಕೆ.ಎಂ.ಗಾಯತ್ರಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…