ಮೈಸೂರು

ಸರ್ಕಾರಿ ಜಾಗ ಸಿಕ್ಕರೆ ಬೊಕ್ಕಹಳ್ಳಿ ಗ್ರಾಮ ಸ್ಥಳಾಂತರಕ್ಕೆ ಚಿಂತನೆ: ಎಚ್‌ಸಿ ಮಹದೇವಪ್ಪ

ಮೈಸೂರು: ವಾಡಿಕೆಗಿಂತ ಈ ಬಾರಿ ಶೇಕಡ 75 ರಷ್ಟು ಹೆಚ್ಚು ಮಳೆ ಸುರಿದಿದ್ದು ಬೊಕ್ಕಹಳ್ಳಿ ಗ್ರಾಮಕ್ಕೆ ಹೆಚ್ಚು ನೀರು ನುಗ್ಗಿದೆ, ಗ್ರಾಮಸ್ಥರು ಗ್ರಾಮದ ಸ್ಥಳಾಂತರಕ್ಕೆ ಒತ್ತಾಯಿಸುತಿದ್ದು ಅಂತಹ ಸಂದರ್ಭ ಸೃಷ್ಟಿಯಾಗಿಲ್ಲ. ಅದರೂ ಗ್ರಾಮಸ್ಥರ ಮನವಿ ಮೇರೆಗೆ ಸರ್ಕಾರಿ ಜಾಗದ ಲಭ್ಯತೆಯ ಆಧಾರದಂತೆ ಗ್ರಾಮ ಸ್ಥಳಾಂತರಿಸಲು ಪರಿಶೀಲಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅಭಿಪ್ರಾಯಿಸಿದರು.

ಶನಿವಾರ (ಆ.03) ನಂಜನಗೂಡು ತಾಲ್ಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಅವರ ಜತೆಗೂಡಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಕಾಳಜಿ ಕೇಂದ್ರದಲ್ಲಿನ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಬಾರಿ ಹೊಳೆಯಿಂದ 80 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಬಂದುದರಿಂದ ಗ್ರಾಮದ ಕೆಲ ಜಮೀನುಗಳು ಮುಳುಗಡೆಯಾಗಿ, ಕೆಲ ಮನೆಗಳಿಗೆ ಭಾಗಶಃ ಹಾನಿಯಾಗಿದೆ. 80 ಮನೆಗಳಿಗೆ ನೀರು ನುಗ್ಗಿದ್ದು, 215 ಜನರನ್ನು ಸ್ಥಳಾಂತರಿಸಲಾಗಿದೆ. 78 ಜನ ಕಾಳಜಿ ಕೇಂದ್ರದಲ್ಲಿ ಉಳಿದಿದ್ದಾರೆ. ಜಿಲ್ಲಾಡಳಿತ ತಗ್ಗಿನ ಪ್ರದೇಶದ ಮನೆಗಳವರಿಗೆ ಜಾಗೃತಿ ಮೂಡಿಸುವುದರೊಂದಿಗೆ ಊಟ,ವಸತಿಗಳೊಂದಿಗೆ ಸಮರ್ಪಕ ವ್ಯವಸ್ಥೆಗಳನ್ನು ಕಲ್ಪಿಸಿದೆ ಎಂದರು.

ಒಟ್ಟಾರೆ ಜಿಲ್ಲೆಯಲ್ಲಿ 345 ಮನೆಗಳಿಗೆ ಹಾನಿಯಾಗಿದ್ದು, 256 ಮನೆಗಳಿಗೆ ಪರಿಹಾರ ನೀಡಲಾಗಿದೆ, 268 ಮನೆಗಳು ಭಾಗಶಃ ಹಾನಿಯಾಗಿವೆ ಇವುಗಳಿಗೆ ಎನ್.ಡಿ.ಆರ್.ಎಫ್ ನಿಯಮಾವಳಿಯಂತೆ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ 220 ಶಾಲೆಗಳು,60 ಅಂಗನವಾಡಿ‌ ಕೇಂದ್ರಗಳು, 40 ರಿಂದ 50 ಕಿಮೀ ಗ್ರಾಮೀಣ ರಸ್ತೆ, 25 ಕಿಮೀ ಪಿಡ್ಲೂಡಿ ರಸ್ತೆ ಹಾಳಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಯತೀಂದ್ರ, ಜಿಲ್ಲಾಧಿಕಾರಿ ಲಕ್ಷೀಕಾಂತ ರೆಡ್ಡಿ, ಜಿ.ಪಂ.ಸಿಇಒ ಕೆ.ಎಂ.ಗಾಯತ್ರಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

32 mins ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

6 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

13 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

13 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

13 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

13 hours ago