ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.
ಪಟ್ಟಣದ ಬಿಜಿಎಸ್ ಭವನದಲ್ಲಿ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕನ್ನಡ ಭಾಷಾ ಶಿಕ್ಷಕರ ಭಾಷಾ ಬಲವರ್ಧನೆಗಾಗಿ ಹಮ್ಮಿಕೊಂಡಿದ್ದ ಶಿಕ್ಷಕರ ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕು ಕಳೆದ ಬಾರಿಗಿಂತ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸುವ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಽಕಾರಿ ರಾಜು ಅವರ ನೇತೃತ್ವದಲ್ಲಿ ಹೊಸ ಯೋಜನೆಗಳು, ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.
೩ ತಿಂಗಳುಗಳಿಂದ ‘ನಾನು ಓದುತ್ತೇನೆ’, ಕನ್ನಡ ಪ್ರಯೋಗಾಲಯ, ಕಲಿಕಾ ಖಾತ್ರಿ ಶಾಲೆಗಳಲ್ಲಿ ವಾಸ್ತವ್ಯ, ಕನ್ನಡ ಹಬ್ಬ, ಇನ್ನಿತರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ೩ ತಿಂಗಳು ಕಷ್ಟಪಟ್ಟು ಪ್ರಾಮಾಣಿಕವಾಗಿ ಮಕ್ಕಳಿಗೆ ಶಿಕ್ಷಣ ನೀಡಿದರೆ ಉತ್ತಮ ಫಲಿತಾಂಶ ಬರಲಿದೆ ಎಂದರು.
ಶಿಕ್ಷಕರಲ್ಲಿ ಇರುವ ಕೌಶಲವನ್ನು ಹೊರಗೆ ತರುವಂತಹ ಕೆಲಸವನ್ನು ಮಾಡುತ್ತಿದ್ದೇವೆ. ತಾಲ್ಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರುವ ದಿಕ್ಕಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಸಿದರು.
ಇದನ್ನು ಓದಿ: ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್ಶೀಟ್ ಸಲ್ಲಿಕೆ
ಇದೇ ವೇಗದಲ್ಲಿ ಎರಡು ವರ್ಷಗಳ ಕಾಲ ಕೆಲಸ ಮಾಡಿದರೆ ರಾಜ್ಯದಲ್ಲಿ ಮಾದರಿ ತಾಲ್ಲೂಕಾಗಿ ಬದಲಾಗುವುದರಲ್ಲಿ ಸಂದೇಹವಿಲ್ಲ ಎಂದರು.
೧,೨೦೦ ಮಕ್ಕಳನ್ನು ನೇರವಾಗಿ ಭೇಟಿ ಮಾಡಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇನೆ. ಅದೇ ರೀತಿ ಮುಖ್ಯ ಶಿಕ್ಷಕರು ಕೂಡ ಉತ್ತಮ ಫಲಿತಾಂಶ ಬರುವ ದಿಕ್ಕಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಬಿಇಒ ಸೇರಿದಂತೆ ಶಿಕ್ಷಕರು ವಿವಿಧ ಸಾಂಸ್ಕ ತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಡಿಡಿಪಿಐ ಎಚ್.ಸಿ.ನರಸಿಂಹಮೂರ್ತಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕೃಷ್ಣಯ್ಯ, ನಂಜಯ್ಯ, ಮಹಾದೇವು, ಲಿಂಗರಾಜು, ಸಿದ್ದರಾಜು, ನಾಗರಾಜು, ಪ್ರಕಾಶ್, ರೂಪ, ವಸಂತ್ ಕುಮಾರ್, ಕೆಂಪರಾಜು, ನಾಗೇಂದ್ರ, ಅಣ್ಣೂರು ಮಹಾದೇವ, ಚಂದ್ರಶೇಖರ್, ಜ್ಯೋತಿ, ದೊರೆರಾಜು, ಗಿರೀಶ್ ಮೂರ್ತಿ, ದೊರೆಸ್ವಾಮಿ, ಸೋಮಸುಂದರ್, ಪುಟ್ಟರಾಜು, ರವೀಂದ್ರ, ಚಿನ್ನಸ್ವಾಮಿ, ಶಿವಪ್ರಕಾಶ್, ಶಿವಯ್ಯ, ಕೃಷ್ಣಮೂರ್ತಿ, ಚಿಕ್ಕದೇವು, ಸುನಂದಾ, ಕಬಿನಿ ಹೇಮಂತ, ಸಿದ್ದರಾಮ, ವನಸಿರಿ ಉಮೇಶ, ರವಿ, ಮಹೇಶ್, ಲಿಂಗರಾಜು, ಪ್ರಕಾಶ್, ಕೆಂಪರಾಜು, ನಾಗೇಂದ್ರ, ಚಂದ್ರಶೇಖರ್, ಗೌರಿ, ನಾರಾಯಣ ಸ್ವಾಮಿ, ಕಂದೇಗಾಲ ಶಿವರಾಜ್, ವಸಂತ್ ಕುಮಾರ್, ಚಂದ್ರಶೇಖರ್, ಪುಟ್ಟರಾಜು, ಪ್ರತಿಭಾ, ರವೀಂದ್ರ, ಕೃಷ್ಣಮೂರ್ತಿ, ಚಿಕ್ಕದೇವು, ಮಹೇಶ್, ನಾಗೇಂದ್ರ, ನಾಗರಾಜು, ಮಂಜುನಾಥ್, ವೆಂಕಟರಂಗ, ಚೆನ್ನಾಯಕ, ಪ್ರಮೋದ್, ರೂಪ, ಬಬಿತಾ, ಕುಮಾರ, ೧,೨೦೦ ಶಿಕ್ಷಕರು ಹಾಜರಿದ್ದರು.
ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ರೇವಣ್ಣ…
ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…
ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…
ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು…
ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…