ಮೈಸೂರು

ಎಚ್.ಡಿ ಕೋಟೆ: ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ

ಎಚ್.ಡಿ.ಕೋಟೆ: ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಪತ್ನಿಯನ್ನೇ ಕತ್ತು ಕೊಯ್ದು ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ.

ತಾಲ್ಲೂಕಿನ ಕಣಿಯನಹುಂಡಿ ಗ್ರಾಮದ ತೇಜಸ್ವಿನಿ (25) ಗಂಡನಿಂದ ಕೊಲೆಯಾದ ಮಹಿಳೆ. ಗ್ರಾಮದ ರೈತ ದೇವರಾಜ ಕೊಲೆಗೈದ ಆರೋಪಿ.

7 ವರ್ಷಗಳ ಹಿಂದೆ ತನ್ನ ಅಕ್ಕನ ಮಗಳಾದ ಕುಟ್ಟವಾಡಿ ಬಸವಾಳ ಗ್ರಾಮದ ವಾಸಿ ತೇಜಸ್ವಿನಿಯನ್ನು ದೇವರಾಜ ಮದುವೆಯಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ಒಂದೂವರೆ ತಿಂಗಳ ಹಿಂದೆ ತೇಜಸ್ವಿನಿ ತಮ್ಮ ಸ್ವಂತ ಊರಿನ ದರ್ಶನ್ ಗೌಡ ಎಂಬವರ ಜೊತೆ ಓಡಿ ಹೋಗಿದ್ದರು. ನಂತರ ಪೊಲೀಸ್ ಠಾಣೆಗೆ ದೂರು ನೀಡಿ ತೇಜಸ್ವಿನಿಯನ್ನು 2  ದಿನಗಳ ನಂತರ ಬೆಂಗಳೂರಿನಿಂದ ಕರೆತಂದು, ಸ್ವಲ್ಪ ದಿನ ತವರು ಮನೆಗೆ ಬಿಟ್ಟಿದ್ದರು.

ಮಂಗಳವಾರ ಗಂಡನ ಮನೆಗೆ ಹೋಗುತ್ತೇನೆ ಎಂದು ಕೋಟೆ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದು, ದೇವರಾಜರ ಜೊತೆಗೆ ಕಣಿಯನ ಹುಂಡಿ ಗ್ರಾಮದ ತೋಟದ ಮನೆಗೆ ಕಳಿಸಲಾಗಿತ್ತು. ಪತ್ನಿಯ ನಡವಳಿಕೆಯಿಂದ ಬೇಸತ್ತ ದೇವರಾಜ ಮನೆಯಲ್ಲಿ ಮಧ್ಯಾಹ್ನ 12 ಗಂಟೆ ಸಂದರ್ಭದಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ಮನೆ ಹಿಂಭಾಗ ಕರೆದೊಯ್ದು, ಆಕೆಯ ಕತ್ತನ್ನು ಕೊಯ್ದು ಸಾಯಿಸಿ, ನಂತರ ಹಂಪಾಪುರ ಉಪ ಪೊಲೀಸ್ ಠಾಣೆಯ ಪೇದೆ ಸುರೇಶ ಅವರಿಗೆ ನಡೆದ ವಿಚಾರದ ಬಗ್ಗೆ ದೂರವಾಣಿ ಮುಖಾಂತರ ತಿಳಿಸಿದ್ದಾರೆ. ಅವರು ಠಾಣೆಗೆ ಬರುವಂತೆ ತಿಳಿಸಿದ್ದಾರೆ. ಕೋಟೆ ಪೊಲೀಸ್ ಠಾಣೆಯ ಎಸ್‌ಐ ಸುರೇಶ್ ನಾಯಕ್, ಮಾದೇವಸ್ವಾಮಿ ಹಂಪಾಪುರ ಪೊಲೀಸ್ ಠಾಣೆಗೆ ಹೋಗಿ ಆರೋಪಿ ದೇವರಾಜ ಅವರನ್ನು ಕೋಟೆ ಪೊಲೀಸ್ ಠಾಣೆಗೆ ಕರೆತಂದು ಬಂಧಿಸಿದ್ದಾರೆ.

ಸ್ಥಳಕ್ಕೆ ಸರ್ಕಲ್ ಇನ್‌ಸ್ಪೆಕ್ಟರ್ ಶಬೀರ್ ಹುಸೇನ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಸ್‌ಪಿ ವಿಷ್ಣುವರ್ಧನ್, ಡಿವೈಎಸ್ಪಿ ಗೋಪಾಲಕೃಷ್ಣ, ಮತ್ತಿತರರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

4 mins ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

26 mins ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

53 mins ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

1 hour ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

1 hour ago

ಕೆಎಸ್‌ಆರ್‌ಟಿಸಿ ಮಹಿಳಾ ಸಿಬ್ಬಂದಿಗಳಿಗೆ ಗುಡ್‌ನ್ಯೂಸ್‌ : ತಿಂಗಳಿಗೊಂದು ಋತುಚಕ್ರ ರಜೆ ನೀಡಲು ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…

1 hour ago