ಮೈಸೂರು

ಎಚ್.ಡಿ ಕೋಟೆ: ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ

ಎಚ್.ಡಿ.ಕೋಟೆ: ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಪತ್ನಿಯನ್ನೇ ಕತ್ತು ಕೊಯ್ದು ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ.

ತಾಲ್ಲೂಕಿನ ಕಣಿಯನಹುಂಡಿ ಗ್ರಾಮದ ತೇಜಸ್ವಿನಿ (25) ಗಂಡನಿಂದ ಕೊಲೆಯಾದ ಮಹಿಳೆ. ಗ್ರಾಮದ ರೈತ ದೇವರಾಜ ಕೊಲೆಗೈದ ಆರೋಪಿ.

7 ವರ್ಷಗಳ ಹಿಂದೆ ತನ್ನ ಅಕ್ಕನ ಮಗಳಾದ ಕುಟ್ಟವಾಡಿ ಬಸವಾಳ ಗ್ರಾಮದ ವಾಸಿ ತೇಜಸ್ವಿನಿಯನ್ನು ದೇವರಾಜ ಮದುವೆಯಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ಒಂದೂವರೆ ತಿಂಗಳ ಹಿಂದೆ ತೇಜಸ್ವಿನಿ ತಮ್ಮ ಸ್ವಂತ ಊರಿನ ದರ್ಶನ್ ಗೌಡ ಎಂಬವರ ಜೊತೆ ಓಡಿ ಹೋಗಿದ್ದರು. ನಂತರ ಪೊಲೀಸ್ ಠಾಣೆಗೆ ದೂರು ನೀಡಿ ತೇಜಸ್ವಿನಿಯನ್ನು 2  ದಿನಗಳ ನಂತರ ಬೆಂಗಳೂರಿನಿಂದ ಕರೆತಂದು, ಸ್ವಲ್ಪ ದಿನ ತವರು ಮನೆಗೆ ಬಿಟ್ಟಿದ್ದರು.

ಮಂಗಳವಾರ ಗಂಡನ ಮನೆಗೆ ಹೋಗುತ್ತೇನೆ ಎಂದು ಕೋಟೆ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದು, ದೇವರಾಜರ ಜೊತೆಗೆ ಕಣಿಯನ ಹುಂಡಿ ಗ್ರಾಮದ ತೋಟದ ಮನೆಗೆ ಕಳಿಸಲಾಗಿತ್ತು. ಪತ್ನಿಯ ನಡವಳಿಕೆಯಿಂದ ಬೇಸತ್ತ ದೇವರಾಜ ಮನೆಯಲ್ಲಿ ಮಧ್ಯಾಹ್ನ 12 ಗಂಟೆ ಸಂದರ್ಭದಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ಮನೆ ಹಿಂಭಾಗ ಕರೆದೊಯ್ದು, ಆಕೆಯ ಕತ್ತನ್ನು ಕೊಯ್ದು ಸಾಯಿಸಿ, ನಂತರ ಹಂಪಾಪುರ ಉಪ ಪೊಲೀಸ್ ಠಾಣೆಯ ಪೇದೆ ಸುರೇಶ ಅವರಿಗೆ ನಡೆದ ವಿಚಾರದ ಬಗ್ಗೆ ದೂರವಾಣಿ ಮುಖಾಂತರ ತಿಳಿಸಿದ್ದಾರೆ. ಅವರು ಠಾಣೆಗೆ ಬರುವಂತೆ ತಿಳಿಸಿದ್ದಾರೆ. ಕೋಟೆ ಪೊಲೀಸ್ ಠಾಣೆಯ ಎಸ್‌ಐ ಸುರೇಶ್ ನಾಯಕ್, ಮಾದೇವಸ್ವಾಮಿ ಹಂಪಾಪುರ ಪೊಲೀಸ್ ಠಾಣೆಗೆ ಹೋಗಿ ಆರೋಪಿ ದೇವರಾಜ ಅವರನ್ನು ಕೋಟೆ ಪೊಲೀಸ್ ಠಾಣೆಗೆ ಕರೆತಂದು ಬಂಧಿಸಿದ್ದಾರೆ.

ಸ್ಥಳಕ್ಕೆ ಸರ್ಕಲ್ ಇನ್‌ಸ್ಪೆಕ್ಟರ್ ಶಬೀರ್ ಹುಸೇನ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಸ್‌ಪಿ ವಿಷ್ಣುವರ್ಧನ್, ಡಿವೈಎಸ್ಪಿ ಗೋಪಾಲಕೃಷ್ಣ, ಮತ್ತಿತರರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

3 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

3 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

5 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

6 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

7 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

8 hours ago