ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ರೈತ ಬೆಳೆದಿದ್ದ ಒಂದು ಟನ್ ನೇಂದ್ರ ಬಾಳೆಯನ್ನು ದುಷ್ಕರ್ಮಿಗಳು ಕಳವು ಮಾಡಿರುವ ಘಟನೆ ನಡೆದಿದೆ.
ರೈತ ಶೇಖರ್ ಬಸವರಾಜೇಗೌಡ ಎಂಬವರ ೪ ಎಕರೆ ಬಾಳೆ ತೋಟದಲ್ಲಿ ನೇಂದ್ರ ಬಾಳೆ ಕಟಾವಿಗೆ ಬಂದಿತ್ತು. ಶನಿವಾರ ರಾತ್ರಿ ಕಳ್ಳರ ಗುಂಪು ಸುಮಾರು ಒಂದು ಟನ್ ನೇಂದ್ರ ಬಾಳೆಯನ್ನು ಕಳವು ಮಾಡಿದ್ದಾರೆ. ಕಳ್ಳತನದಿಂದ ಸುಮಾರು ೫೦,೦೦೦ ರೂ. ನಷ್ಟವಾಗಿದೆ ಎಂದು ರೈತ ತಿಳಿಸಿದ್ದಾರೆ.
ಭಾನುವಾರ ಬೆಳಿಗ್ಗೆ ರೈತ ಜಮೀನಿಗೆ ಬಂದು ನೋಡಿ ಕಳ್ಳತನವಾಗಿರುವುದನ್ನು ಗಮನಿಸಿ ಹಂಪಾಪುರ ಉಪ ಪೊಲೀಸ್ ಠಾಣೆಗೆ ವಿಚಾರ ತಿಳಿಸಿದ್ದಾರೆ. ಈ ಸಂಬಂಧ ದೂರು ದಾಖಲಾಗಿದೆ. ಜಮೀನಿನ ಸುತ್ತಮುತ್ತ ರಾಜಾರೋಷವಾಗಿ ಅನೇಕ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಕಳ್ಳತನಕ್ಕೆ ದಾರಿಯಾಗಿದೆ ಎಂದು ಅವರು ದೂರಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…