ಹೆಚ್.ಡಿ.ಕೋಟೆ : ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವವರು, ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಪ್ರಾಣಿಗಳನ್ನು ಪ್ರೀತಿಸುವುದು ತಪ್ಪಲ್ಲ, ಆದರೆ ಮನುಷ್ಯರನ್ನು ವಿರೋಧಿಸುವುದು ತಪ್ಪು ಎಂದರು.
ನಮ್ಮ ಸರ್ಕಾರ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಆರ್ಥಿಕವಾಗಿ ಸರ್ವರಿಗೂ ಶಕ್ತಿ ಬಂದರೆ ಜಾತಿ ಹೋಗುತ್ತದೆ. ಬುದ್ದ, ಬಸವ ಅವರು ಜಾತಿಹೋಗಬೇಕೆಂದು ಹೋರಾಟ ಮಾಡಿದರೂ ಇನ್ನೂ ಜಾತಿ ಹೋಗಿಲ್ಲ. ಬಸವಣ್ಣರನ್ನು ಪ್ರೀತಿಸ್ತೀವಿ, ಪೂಜಿಸ್ತೀವಿ. ಆದರೆ ಬಸವಣ್ಣರನ್ನು ಪಾಲಿಸುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾವು ಹುಟ್ಡಿದ ಜಾತಿಯಲ್ಲೇ ಸಾಯಬೇಕು. ನಾವು ಮೇಲಕ್ಕೆ ಹೋಗುವಂತಿಲ್ಲ. ಜಾತಿ ಸಮಾಜಕ್ಕೆ ಚಲನೆ ಇಲ್ಲ. ವರ್ಗಕ್ಕೆ ಚಲನೆ ಇದೆ. ಎಲ್ಲರಿಗೂ ಶಿಕ್ಷಣ ಸಿಕ್ಕು , ಆರ್ಥಿಕವಾಗಿ, ಸಾಮಾಜಿಕವಾಗಿ ಅವಕಾಶಗಳು ಸಿಕ್ಕಾಗ ಮಾತ್ರ ಸಮಾಜಕ್ಕೆ ಚಲನೆ ಸಿಗುತ್ತದೆ ಎಂದರು.
ಜಾತಿ ಅಸಮಾನತೆ ಕಾರಣಕ್ಕೆ ಅಂಬೇಡ್ಕರ್ ಬೌದ್ಧ ಧರ್ಮಕ್ಕೆ ಸೇರಿ, ತಾನು ಹಿಂದೂವಾಗಿ ಹುಟ್ಟಿ ಹಿಂದೂವಾಗಿ ಸಾಯುವುದಿಲ್ಲ ಎಂದು ಘೋಷಿದಿದ್ದನ್ನು ಸ್ಮರಿಸಿದರು.
ಒಳಮೀಸಲಾತಿ ಕುರಿತಾದ ಗೊಂದಲ ನಿವಾರಿಸಲು ನಾಗಮೋಹನ್ ದಾಸ್ ಅವರ ಸಮಿತಿ ರಚಿಸಿದ್ದೇವೆ. ಸಮಿತಿಯ ಶಿಫಾರಸ್ಸಿನಂತೆ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ಆರಂಭಿಸಿದ್ದೇವೆ ಎಂದರು. ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆ ಒಳ ಮೀಸಲಾತಿಯ ಎಲ್ಲಾ ಗೊಂದಲಗಳನ್ನು ನಿವಾರಿಸುತ್ತದೆ ಎನ್ನುವ ಭರವಸೆ ಇದೆ ಎಂದರು.
ಅಂಬೇಡ್ಕರ್ ಅವರು ಮೀಸಲಾತಿ ಕೊಡದೇ ಹೋಗಿದ್ದರೆ ನಾವು ಮನುಷ್ಯರಾಗಲು ಸಾಧ್ಯವೇ ಇರಲಿಲ್ಲ. ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ . ಶತ ಶತಮಾನಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಡಲಾಗಿತ್ತು. ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆದು ಮುಖ್ಯಮಂತ್ರಿ ಆದೆ, ಇಲ್ಲದಿದ್ದರೆ ಕುರಿನೊ, ಎಮ್ಮೆನೊ ಕಾಯ್ಕಂಡು ಇರಬೇಕಿತ್ತು ಎಂದರು.
ಇದನ್ನೂ ಓದಿ:- ಹೆಚ್.ಡಿ ಕೋಟೆಗೆ 140 ಕೋಟಿ ಸವಲತ್ತು ವಿತರಿಸಿದ ಸಿಎಂ
ನಮ್ಮ ಸ್ಥಿತಿಗೆ ಶಿಕ್ಷಣ ಮತ್ತು ಸಾಮಾಜಿಕ ಪರಿಸ್ಥಿತಿಗಳೇ ಕಾರಣವೇ ಹೊರತು ಹಣೆಬರಹ ಕಾರಣ ಅಲ್ಲ. ಪೂರ್ವ ಜನ್ಮದ ಪಾಪದ ಕಾರಣಕ್ಕೆ ಈಗ ಬಡತನ ಬಂದಿದೆ ಎನ್ನುವ ಕರ್ಮ ಸಿದ್ಧಾಂತ ಅಪ್ಪಟ ಸುಳ್ಳು. ಅದಕ್ಕೇ ಕರ್ಮ ಸಿದ್ದಾಂತ ತಿರಸ್ಕರಿಸಿ ಎಂದು ಬಸವಣ್ಣನವರು ಕರೆ ನೀಡಿದರು ಎಂದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…