ಎಚ್.ಡಿ ಕೋಟೆ: ಪಟ್ಟಣದ ಸಮೀಪದ ಕಟ್ಟಮನಗನಹಳ್ಳಿ ಗ್ರಾಮದ ಬಳಿ ರೈತರ ಜಮೀನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆಯೊಂದು ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಈ ಚಿರತೆ ಬಿದ್ದಿದ್ದು, ಚಿರತೆಯನ್ನು ನಾಗರಹೊಳೆ ಅಭಯಾರಣ್ಯಕ್ಕೆ ಬಿಡಲಾಗಿದೆ.
ಗ್ರಾಮದ ನಿವಾಸಿ ರೈತ ಅಂಗಡಿ ಗುರುಸ್ವಾಮಿ ಎಂಬುವರ ಜಮೀನಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಮೇಯುತಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಎಳೆದುಕೊಂಡು ಹೋಗುತ್ತಿತ್ತು. ಇದನ್ನು ಗುರುಸ್ವಾಮಿ ಕುಟುಂಬದವರು ಕಿರುಚಾಡಿದಾಗ ಕರುವನ್ನು ಬಿಟ್ಟು ಚಿರತೆ ಪರಾರಿಯಾಗಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯಯವರು ಜಮೀನಿನಲ್ಲಿ ಬೋನು ಇರಿಸಿ ಸತ್ತು ಹೋಗಿದ್ದ ಕರುವನ್ನು ಒಳಗೆ ಇಟ್ಟಿದ್ದರು. ಇದೀಗ ಕರವನ್ನು ತಿನ್ನಲು ಆಗಮಿಸಿದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಕಳೆದ ಒಂದು ತಿಂಗಳಿನಿಂದ ಕಟ್ಟೆ ಮನಗನಹಳ್ಳಿ, ಮೊತ್ತ ಅಲ್ತಾಲ್ಲುಂಡಿ ಗ್ರಾಮದಲ್ಲಿ ರೈತರ ಜಮೀನುಗಳಲ್ಲಿ ಮೇಯುತಿದ್ದ ಕರುಗಳ ಮೇಲೆ ದಾಳಿ ನಡೆಸಿ ಸಾಯಿಸುತ್ತಿದ್ದ ಚಿರತೆಯ ಆರ್ಭಟದಿಂದ ಜನಸಾಮಾನ್ಯರು ಗ್ರಾಮಸ್ಥರು ರೈತರು ಆತಂಕಕ್ಕೆ ಆತಂಕ ಉಂಟು ಮಾಡಿತ್ತು. ಇದೀಗ ಚಿರತೆ ಸೆರೆ ಯಾದ ಹಿನ್ನೆಲೆ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಬೆಂಗಳೂರು: 2026ರ ಐಪಿಎಲ್ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್ಸಿಎ ಚುನಾವಣೆ ಮತದಾನದ ವೇಳೆ…
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…