ಎಚ್.ಡಿ ಕೋಟೆ: ಪಟ್ಟಣದ ಸಮೀಪದ ಕಟ್ಟಮನಗನಹಳ್ಳಿ ಗ್ರಾಮದ ಬಳಿ ರೈತರ ಜಮೀನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆಯೊಂದು ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಈ ಚಿರತೆ ಬಿದ್ದಿದ್ದು, ಚಿರತೆಯನ್ನು ನಾಗರಹೊಳೆ ಅಭಯಾರಣ್ಯಕ್ಕೆ ಬಿಡಲಾಗಿದೆ.
ಗ್ರಾಮದ ನಿವಾಸಿ ರೈತ ಅಂಗಡಿ ಗುರುಸ್ವಾಮಿ ಎಂಬುವರ ಜಮೀನಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಮೇಯುತಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಎಳೆದುಕೊಂಡು ಹೋಗುತ್ತಿತ್ತು. ಇದನ್ನು ಗುರುಸ್ವಾಮಿ ಕುಟುಂಬದವರು ಕಿರುಚಾಡಿದಾಗ ಕರುವನ್ನು ಬಿಟ್ಟು ಚಿರತೆ ಪರಾರಿಯಾಗಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯಯವರು ಜಮೀನಿನಲ್ಲಿ ಬೋನು ಇರಿಸಿ ಸತ್ತು ಹೋಗಿದ್ದ ಕರುವನ್ನು ಒಳಗೆ ಇಟ್ಟಿದ್ದರು. ಇದೀಗ ಕರವನ್ನು ತಿನ್ನಲು ಆಗಮಿಸಿದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಕಳೆದ ಒಂದು ತಿಂಗಳಿನಿಂದ ಕಟ್ಟೆ ಮನಗನಹಳ್ಳಿ, ಮೊತ್ತ ಅಲ್ತಾಲ್ಲುಂಡಿ ಗ್ರಾಮದಲ್ಲಿ ರೈತರ ಜಮೀನುಗಳಲ್ಲಿ ಮೇಯುತಿದ್ದ ಕರುಗಳ ಮೇಲೆ ದಾಳಿ ನಡೆಸಿ ಸಾಯಿಸುತ್ತಿದ್ದ ಚಿರತೆಯ ಆರ್ಭಟದಿಂದ ಜನಸಾಮಾನ್ಯರು ಗ್ರಾಮಸ್ಥರು ರೈತರು ಆತಂಕಕ್ಕೆ ಆತಂಕ ಉಂಟು ಮಾಡಿತ್ತು. ಇದೀಗ ಚಿರತೆ ಸೆರೆ ಯಾದ ಹಿನ್ನೆಲೆ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…