ಎಚ್.ಡಿ ಕೋಟೆ: ಪಟ್ಟಣದ ಸಮೀಪದ ಕಟ್ಟಮನಗನಹಳ್ಳಿ ಗ್ರಾಮದ ಬಳಿ ರೈತರ ಜಮೀನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆಯೊಂದು ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಈ ಚಿರತೆ ಬಿದ್ದಿದ್ದು, ಚಿರತೆಯನ್ನು ನಾಗರಹೊಳೆ ಅಭಯಾರಣ್ಯಕ್ಕೆ ಬಿಡಲಾಗಿದೆ.
ಗ್ರಾಮದ ನಿವಾಸಿ ರೈತ ಅಂಗಡಿ ಗುರುಸ್ವಾಮಿ ಎಂಬುವರ ಜಮೀನಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಮೇಯುತಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಎಳೆದುಕೊಂಡು ಹೋಗುತ್ತಿತ್ತು. ಇದನ್ನು ಗುರುಸ್ವಾಮಿ ಕುಟುಂಬದವರು ಕಿರುಚಾಡಿದಾಗ ಕರುವನ್ನು ಬಿಟ್ಟು ಚಿರತೆ ಪರಾರಿಯಾಗಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯಯವರು ಜಮೀನಿನಲ್ಲಿ ಬೋನು ಇರಿಸಿ ಸತ್ತು ಹೋಗಿದ್ದ ಕರುವನ್ನು ಒಳಗೆ ಇಟ್ಟಿದ್ದರು. ಇದೀಗ ಕರವನ್ನು ತಿನ್ನಲು ಆಗಮಿಸಿದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಕಳೆದ ಒಂದು ತಿಂಗಳಿನಿಂದ ಕಟ್ಟೆ ಮನಗನಹಳ್ಳಿ, ಮೊತ್ತ ಅಲ್ತಾಲ್ಲುಂಡಿ ಗ್ರಾಮದಲ್ಲಿ ರೈತರ ಜಮೀನುಗಳಲ್ಲಿ ಮೇಯುತಿದ್ದ ಕರುಗಳ ಮೇಲೆ ದಾಳಿ ನಡೆಸಿ ಸಾಯಿಸುತ್ತಿದ್ದ ಚಿರತೆಯ ಆರ್ಭಟದಿಂದ ಜನಸಾಮಾನ್ಯರು ಗ್ರಾಮಸ್ಥರು ರೈತರು ಆತಂಕಕ್ಕೆ ಆತಂಕ ಉಂಟು ಮಾಡಿತ್ತು. ಇದೀಗ ಚಿರತೆ ಸೆರೆ ಯಾದ ಹಿನ್ನೆಲೆ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…