ಎಚ್.ಡಿ ಕೋಟೆ: ಪಟ್ಟಣದ ಸಮೀಪದ ಕಟ್ಟಮನಗನಹಳ್ಳಿ ಗ್ರಾಮದ ಬಳಿ ರೈತರ ಜಮೀನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆಯೊಂದು ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಈ ಚಿರತೆ ಬಿದ್ದಿದ್ದು, ಚಿರತೆಯನ್ನು ನಾಗರಹೊಳೆ ಅಭಯಾರಣ್ಯಕ್ಕೆ ಬಿಡಲಾಗಿದೆ.
ಗ್ರಾಮದ ನಿವಾಸಿ ರೈತ ಅಂಗಡಿ ಗುರುಸ್ವಾಮಿ ಎಂಬುವರ ಜಮೀನಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಮೇಯುತಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಎಳೆದುಕೊಂಡು ಹೋಗುತ್ತಿತ್ತು. ಇದನ್ನು ಗುರುಸ್ವಾಮಿ ಕುಟುಂಬದವರು ಕಿರುಚಾಡಿದಾಗ ಕರುವನ್ನು ಬಿಟ್ಟು ಚಿರತೆ ಪರಾರಿಯಾಗಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯಯವರು ಜಮೀನಿನಲ್ಲಿ ಬೋನು ಇರಿಸಿ ಸತ್ತು ಹೋಗಿದ್ದ ಕರುವನ್ನು ಒಳಗೆ ಇಟ್ಟಿದ್ದರು. ಇದೀಗ ಕರವನ್ನು ತಿನ್ನಲು ಆಗಮಿಸಿದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಕಳೆದ ಒಂದು ತಿಂಗಳಿನಿಂದ ಕಟ್ಟೆ ಮನಗನಹಳ್ಳಿ, ಮೊತ್ತ ಅಲ್ತಾಲ್ಲುಂಡಿ ಗ್ರಾಮದಲ್ಲಿ ರೈತರ ಜಮೀನುಗಳಲ್ಲಿ ಮೇಯುತಿದ್ದ ಕರುಗಳ ಮೇಲೆ ದಾಳಿ ನಡೆಸಿ ಸಾಯಿಸುತ್ತಿದ್ದ ಚಿರತೆಯ ಆರ್ಭಟದಿಂದ ಜನಸಾಮಾನ್ಯರು ಗ್ರಾಮಸ್ಥರು ರೈತರು ಆತಂಕಕ್ಕೆ ಆತಂಕ ಉಂಟು ಮಾಡಿತ್ತು. ಇದೀಗ ಚಿರತೆ ಸೆರೆ ಯಾದ ಹಿನ್ನೆಲೆ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…