ಮೈಸೂರು: ಹೆಗ್ಗಡದೇವನ ಕೋಟೆ ತಾಲೂಕಿನ ಡಿ .ಬಿ ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗೋಳೂರು ಹಾಡಿಯಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಗಾಗಿ ಆಗ್ರಹಿಸಿ ಮಹಿಳೆಯರು ಸೋಮವಾರ ಪ್ರತಿಭಟನೆ ನಡೆಸಿದರು.
ಗೋಳುರು ಹಾಡಿಯಲ್ಲಿ ಬಹುತೇಕ ಆದಿವಾಸಿ ಜನರು ವಾಸಿಸುತ್ತಿದ್ದು, ಅದರಲ್ಲೂ ವಯೋವೃದ್ಧರು ಹಾಗೂ ಮಹಿಳೆಯರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕುಡಿಯುವ ನೀರನ್ನು ಸಹ ಸಮರ್ಪಕವಾಗಿ ನೀಡದೇ ಡಿ.ಬಿ ಕುಪ್ಪೆ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯವಹಿಸಿದೆ.
ಈ ಹಿಂದೆ ಹಲವಾರು ಬಾರಿ ಪ್ರತಿಭಟಿಸಿ ಮನವಿ ಪತ್ರಗಳನ್ನು ಸಲ್ಲಿಸಿದರು ಸಹ ಗ್ರಾಮ ಪಂಚಾಯಿತಿ ಗಮನಹರಿಸಿಲ್ಲ. ಮನವಿ ಪತ್ರಗಳಿಂದ ಯಾವುದೇ ಪ್ರಯೋಜನೆಯಾಗಿಲ್ಲ ಎಂದು ಮಹಿಳೆಯರು ಆಕ್ರೋಶ ಹೊರಹಾಕಿದರು.
ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಇನ್ನಿತರ ಮೂಲಭೂತ ಸೌಕರ್ಯಗಳಾದ ವಸತಿ, ವಿದ್ಯುತ್ ಸಮಸ್ಯೆಯಿಂದಾಗಿ ಮಳೆಗಾಲದಲ್ಲಿ ಮನೆಗಳ ಸೋರುತ್ತಿದೆ. ಕತ್ತಲೆಯಲ್ಲಿ ಪ್ರಾಣಿಗಳ ದಾಳಿಯ ಭಯದಲ್ಲಿ ಮಕ್ಕಳು ,ಬಾಣಂತಿಯರು, ಗರ್ಭಿಣಿ ಸ್ತ್ರೀಯರು, ವೃದ್ಧರು ಜೀವವನ್ನು ಕೈಯಲ್ಲಿ ಹಿಡಿದು ಬದುಕುವ ಪರಿಸ್ಥಿತಿ ಇದೆ. ಹಾಗಾಗಿ ಈ ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಇನ್ನಿತರ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಗೋಳೂರು ಹಾಡಿಯ ಜನರಾದ ಗೌರಮ್ಮ, ಮಣಿ, ಗಂಗೆ, ಸುಶೀಲ, ರಾಣಿ ,ಅಶೋಕ ,ಗೌರಿ ಶಾಂತಿ ಇನ್ನಿತರರು ಆಗ್ರಹಿಸಿದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…