ಮೈಸೂರು

ಎಚ್.ಡಿ ಕೋಟೆ: ಕುಡಿಯುವ ನೀರಿಗಾಗಿ ಪ್ರತಿಭಟನೆ

ಮೈಸೂರು: ಹೆಗ್ಗಡದೇವನ ಕೋಟೆ ತಾಲೂಕಿನ ಡಿ .ಬಿ ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗೋಳೂರು ಹಾಡಿಯಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಗಾಗಿ ಆಗ್ರಹಿಸಿ ಮಹಿಳೆಯರು ಸೋಮವಾರ ಪ್ರತಿಭಟನೆ ನಡೆಸಿದರು.

ಗೋಳುರು ಹಾಡಿಯಲ್ಲಿ ಬಹುತೇಕ ಆದಿವಾಸಿ ಜನರು ವಾಸಿಸುತ್ತಿದ್ದು, ಅದರಲ್ಲೂ ವಯೋವೃದ್ಧರು ಹಾಗೂ ಮಹಿಳೆಯರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕುಡಿಯುವ ನೀರನ್ನು ಸಹ ಸಮರ್ಪಕವಾಗಿ ನೀಡದೇ ಡಿ.ಬಿ ಕುಪ್ಪೆ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯವಹಿಸಿದೆ.

ಈ ಹಿಂದೆ ಹಲವಾರು ಬಾರಿ ಪ್ರತಿಭಟಿಸಿ ಮನವಿ ಪತ್ರಗಳನ್ನು ಸಲ್ಲಿಸಿದರು ಸಹ ಗ್ರಾಮ ಪಂಚಾಯಿತಿ ಗಮನಹರಿಸಿಲ್ಲ. ಮನವಿ ಪತ್ರಗಳಿಂದ ಯಾವುದೇ ಪ್ರಯೋಜನೆಯಾಗಿಲ್ಲ ಎಂದು ಮಹಿಳೆಯರು ಆಕ್ರೋಶ ಹೊರಹಾಕಿದರು.

ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಇನ್ನಿತರ ಮೂಲಭೂತ ಸೌಕರ್ಯಗಳಾದ ವಸತಿ, ವಿದ್ಯುತ್ ಸಮಸ್ಯೆಯಿಂದಾಗಿ ಮಳೆಗಾಲದಲ್ಲಿ ಮನೆಗಳ ಸೋರುತ್ತಿದೆ. ಕತ್ತಲೆಯಲ್ಲಿ ಪ್ರಾಣಿಗಳ ದಾಳಿಯ ಭಯದಲ್ಲಿ ಮಕ್ಕಳು ,ಬಾಣಂತಿಯರು, ಗರ್ಭಿಣಿ ಸ್ತ್ರೀಯರು, ವೃದ್ಧರು ಜೀವವನ್ನು ಕೈಯಲ್ಲಿ ಹಿಡಿದು ಬದುಕುವ ಪರಿಸ್ಥಿತಿ ಇದೆ. ಹಾಗಾಗಿ ಈ ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಇನ್ನಿತರ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಗೋಳೂರು ಹಾಡಿಯ ಜನರಾದ ಗೌರಮ್ಮ, ಮಣಿ, ಗಂಗೆ, ಸುಶೀಲ, ರಾಣಿ ,ಅಶೋಕ ,ಗೌರಿ ಶಾಂತಿ ಇನ್ನಿತರರು ಆಗ್ರಹಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

7 mins ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

1 hour ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

2 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

2 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

2 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

3 hours ago