ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಅಂತರಸಂತೆಯಿಂದ ನೂರಲಕುಪ್ಪೆ, ಚಿಲ್ಲರೆ ಮರದ ತಿಟ್ಟು, ಮಚ್ಚರೆ, ರಾಮೇನಹಳ್ಳಿ, ಆನಗಟ್ಟಿ ಗ್ರಾಮಗಳಿಗೆ ತೆರಳಲು ವಿದ್ಯಾರ್ಥಿಗಳು ಪರಿಪಾಟಲು ಅನುಭವಿಸುತ್ತಿದ್ದು, ಬಸ್ ವ್ಯವಸ್ಥೆ ಇಲ್ಲದೇ ತೀವ್ರ ಪರದಾಟ ನಡೆಸುತ್ತಿದ್ದಾರೆ. ಬಸ್ಗಾಗಿ ಗಂಟೆಗಟ್ಟಲೆ ಕಾಯಬೇಕಾದ ಅನಿವಾರ್ಯತೆ ಎದುರಾಗಿದ್ದು, ಶಾಲಾ ವಿದ್ಯಾರ್ಥಿಗಳ ಗೋಳನ್ನು ಹೇಳೊರಿಲ್ಲ ಕೇಳೊರಿಲ್ಲ ಎನ್ನುವಂತಾಗಿದೆ.
ಸಂಜೆ 4-30ಕ್ಕೆ ಶಾಲೆ ಬಿಟ್ಟರೆ ಮನೆಗೆ ತೆರಳಲು ಗಂಟೆಗಟ್ಟಲೆ ಬಸ್ಗೆ ಕಾದು ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಕಿಲೋ ಮೀಟರ್ ಗಟ್ಟಲೆ ನಡೆದು ಊರು ಸೇರೋಣ ಎಂದರೆ ಕಾಡು ಪ್ರಾಣಿಗಳ ಕಾಟ ಕೂಡ ಜಾಸ್ತಿಯಾಗಿದ್ದು, ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಈ ಬಗ್ಗೆ ಮಾತನಾಡಿರುವ ವಿದ್ಯಾರ್ಥಿಗಳು, ನಾವು ಶಾಲೆಗೆ ಹೋಗಲು ಸರಿಯಾದ ಬಸ್ ಸೌಕರ್ಯ ಇಲ್ಲದ ಪರಿಣಾಮ ಬೈಕ್ ಹಾಗೂ ಆಟೋಗಳಲ್ಲಿ ಹೋಗುತ್ತಿದ್ದೇವೆ. ಆಟೋಗಳು ಕೂಡ ಸರಿಯಾದ ಸಮಯಕ್ಕೆ ಬರಲ್ಲ. ಓದಲೂ ಆಸಕ್ತಿ ಇದ್ದರೂ ಬಸ್ ತೊಂದರೆಯಿಂದ ಶಾಲೆಯೇ ಬೇಡ ಅನ್ನಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…