ಮೈಸೂರು

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಅಂತರಸಂತೆಯಿಂದ ನೂರಲಕುಪ್ಪೆ, ಚಿಲ್ಲರೆ ಮರದ ತಿಟ್ಟು, ಮಚ್ಚರೆ, ರಾಮೇನಹಳ್ಳಿ, ಆನಗಟ್ಟಿ ಗ್ರಾಮಗಳಿಗೆ ತೆರಳಲು ವಿದ್ಯಾರ್ಥಿಗಳು ಪರಿಪಾಟಲು ಅನುಭವಿಸುತ್ತಿದ್ದು, ಬಸ್‌ ವ್ಯವಸ್ಥೆ ಇಲ್ಲದೇ ತೀವ್ರ ಪರದಾಟ ನಡೆಸುತ್ತಿದ್ದಾರೆ. ಬಸ್‌ಗಾಗಿ ಗಂಟೆಗಟ್ಟಲೆ ಕಾಯಬೇಕಾದ ಅನಿವಾರ್ಯತೆ ಎದುರಾಗಿದ್ದು, ಶಾಲಾ ವಿದ್ಯಾರ್ಥಿಗಳ ಗೋಳನ್ನು ಹೇಳೊರಿಲ್ಲ ಕೇಳೊರಿಲ್ಲ ಎನ್ನುವಂತಾಗಿದೆ.

ಸಂಜೆ 4-30ಕ್ಕೆ ಶಾಲೆ ಬಿಟ್ಟರೆ ಮನೆಗೆ ತೆರಳಲು ಗಂಟೆಗಟ್ಟಲೆ ಬಸ್‌ಗೆ ಕಾದು ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಕಿಲೋ ಮೀಟರ್ ಗಟ್ಟಲೆ ನಡೆದು ಊರು ಸೇರೋಣ ಎಂದರೆ ಕಾಡು ಪ್ರಾಣಿಗಳ ಕಾಟ ಕೂಡ ಜಾಸ್ತಿಯಾಗಿದ್ದು, ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ವಿದ್ಯಾರ್ಥಿಗಳು, ನಾವು ಶಾಲೆಗೆ ಹೋಗಲು ಸರಿಯಾದ ಬಸ್‌ ಸೌಕರ್ಯ ಇಲ್ಲದ ಪರಿಣಾಮ ಬೈಕ್‌ ಹಾಗೂ ಆಟೋಗಳಲ್ಲಿ ಹೋಗುತ್ತಿದ್ದೇವೆ. ಆಟೋಗಳು ಕೂಡ ಸರಿಯಾದ ಸಮಯಕ್ಕೆ ಬರಲ್ಲ. ಓದಲೂ ಆಸಕ್ತಿ ಇದ್ದರೂ ಬಸ್ ತೊಂದರೆಯಿಂದ ಶಾಲೆಯೇ ಬೇಡ ಅನ್ನಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

15 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

15 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

15 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

15 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

16 hours ago