Mysore
24
broken clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಎಚ್‌.ಡಿ ಕೋಟೆ: ಚಿರತೆ ದಾಳಿಗೆ ಎರಡು ಕುರಿ ಬಲಿ

ಎಚ್.ಡಿ.ಕೋಟೆ: ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ರೈತರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎರಡು ಕುರಿಗಳನ್ನು ಕೊಂದು ಹಾಕಿರುವ ಘಟನೆ ನಡೆದಿದೆ.

ಗ್ರಾಮದ ರೈತ ನಿಕೋಲಾಸ್ ರಾಜ್ ಎಂಬವರ ಮನೆುಂಲ್ಲಿ ಎರಡು ಮೂರು ಕುರಿಗಳನ್ನು ಸಾಕಲಾಗಿತ್ತು. ಜಮೀನಿನಲ್ಲಿ ಕುರಿ ಮತ್ತು ಹಸುಗಳನ್ನು ಮೇಯಿಸಿಕೊಂಡು ಬಂದು ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದರು. ಗುರುವಾರ ಮಧ್ಯರಾತ್ರಿ ಚಿರತೆ ಬಂದು ಕುರಿಗಳ ಮೇಲೆ ದಾಳಿ ನಡೆಸಿ ಒಂದು ಕುರಿಯನ್ನು ಕೊಂದು, ರಕ್ತ ಕುಡಿದು ಮತ್ತೊಂದು ಕುರಿಯನ್ನು ಹೊತ್ತೊಯ್ದಿದೆ.

ಚಿರತೆಯ ಆರ್ಭಟ ಮತ್ತು ದನ, ಕುರಿಗಳ ಕಿರುಚಾಟದಿಂದ ನಿವಾಸಿಗಳು ಆತಂಕಗೊಂಡು ಜೋರಾಗಿ ಚೀರಾಟ ನಡೆಸಿದ್ದರಿಂದ ಚಿರತೆ ಅಲ್ಲಿಂದ ಕಾಲ್ಕಿತ್ತಿದೆ.

ಬೆಳಿಗ್ಗೆ ಅರಣ್ಯ ಅಧಿಕಾರಿಗಳಿಗೆ ವಿಚಾರ ತಿಳಿಸಿದಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

 

Tags:
error: Content is protected !!