ಎಚ್.ಡಿ.ಕೋಟೆ: ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ರೈತರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎರಡು ಕುರಿಗಳನ್ನು ಕೊಂದು ಹಾಕಿರುವ ಘಟನೆ ನಡೆದಿದೆ.
ಗ್ರಾಮದ ರೈತ ನಿಕೋಲಾಸ್ ರಾಜ್ ಎಂಬವರ ಮನೆುಂಲ್ಲಿ ಎರಡು ಮೂರು ಕುರಿಗಳನ್ನು ಸಾಕಲಾಗಿತ್ತು. ಜಮೀನಿನಲ್ಲಿ ಕುರಿ ಮತ್ತು ಹಸುಗಳನ್ನು ಮೇಯಿಸಿಕೊಂಡು ಬಂದು ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದರು. ಗುರುವಾರ ಮಧ್ಯರಾತ್ರಿ ಚಿರತೆ ಬಂದು ಕುರಿಗಳ ಮೇಲೆ ದಾಳಿ ನಡೆಸಿ ಒಂದು ಕುರಿಯನ್ನು ಕೊಂದು, ರಕ್ತ ಕುಡಿದು ಮತ್ತೊಂದು ಕುರಿಯನ್ನು ಹೊತ್ತೊಯ್ದಿದೆ.
ಚಿರತೆಯ ಆರ್ಭಟ ಮತ್ತು ದನ, ಕುರಿಗಳ ಕಿರುಚಾಟದಿಂದ ನಿವಾಸಿಗಳು ಆತಂಕಗೊಂಡು ಜೋರಾಗಿ ಚೀರಾಟ ನಡೆಸಿದ್ದರಿಂದ ಚಿರತೆ ಅಲ್ಲಿಂದ ಕಾಲ್ಕಿತ್ತಿದೆ.
ಬೆಳಿಗ್ಗೆ ಅರಣ್ಯ ಅಧಿಕಾರಿಗಳಿಗೆ ವಿಚಾರ ತಿಳಿಸಿದಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…