ಮೈಸೂರು

ಎಚ್‌.ಡಿ ಕೋಟೆ: ಚಿರತೆ ದಾಳಿಗೆ ಎರಡು ಕುರಿ ಬಲಿ

ಎಚ್.ಡಿ.ಕೋಟೆ: ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ರೈತರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎರಡು ಕುರಿಗಳನ್ನು ಕೊಂದು ಹಾಕಿರುವ ಘಟನೆ ನಡೆದಿದೆ.

ಗ್ರಾಮದ ರೈತ ನಿಕೋಲಾಸ್ ರಾಜ್ ಎಂಬವರ ಮನೆುಂಲ್ಲಿ ಎರಡು ಮೂರು ಕುರಿಗಳನ್ನು ಸಾಕಲಾಗಿತ್ತು. ಜಮೀನಿನಲ್ಲಿ ಕುರಿ ಮತ್ತು ಹಸುಗಳನ್ನು ಮೇಯಿಸಿಕೊಂಡು ಬಂದು ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದರು. ಗುರುವಾರ ಮಧ್ಯರಾತ್ರಿ ಚಿರತೆ ಬಂದು ಕುರಿಗಳ ಮೇಲೆ ದಾಳಿ ನಡೆಸಿ ಒಂದು ಕುರಿಯನ್ನು ಕೊಂದು, ರಕ್ತ ಕುಡಿದು ಮತ್ತೊಂದು ಕುರಿಯನ್ನು ಹೊತ್ತೊಯ್ದಿದೆ.

ಚಿರತೆಯ ಆರ್ಭಟ ಮತ್ತು ದನ, ಕುರಿಗಳ ಕಿರುಚಾಟದಿಂದ ನಿವಾಸಿಗಳು ಆತಂಕಗೊಂಡು ಜೋರಾಗಿ ಚೀರಾಟ ನಡೆಸಿದ್ದರಿಂದ ಚಿರತೆ ಅಲ್ಲಿಂದ ಕಾಲ್ಕಿತ್ತಿದೆ.

ಬೆಳಿಗ್ಗೆ ಅರಣ್ಯ ಅಧಿಕಾರಿಗಳಿಗೆ ವಿಚಾರ ತಿಳಿಸಿದಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌…

8 mins ago

ಪೈರಸಿ ಬಗ್ಗೆ ಮತ್ತೊಮ್ಮೆ ಖಡಕ್‌ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್‌

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್‌ ಚಿತ್ರಕ್ಕೂ ಪೈರಸಿ…

39 mins ago

ಜೆಡಿಎಸ್‌ ಜೊತೆ ಮೈತ್ರಿ ವಿಚಾರ: ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದ ವಿಜಯೇಂದ್ರ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…

1 hour ago

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

3 hours ago

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

3 hours ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

3 hours ago