ಮೈಸೂರು: ಸಮ್ಮಿಶ್ರ ಸರ್ಕಾರದ ಪತನದ ನಂತರ ಹಲವು ಸಂಘರ್ಷಗಳಿಗೆ ಎಡೆಮಾಡಿಕೊಟ್ಟಿದ್ದು, ಈವೆಲ್ಲಕ್ಕೂ ಈಗ ತೆರೆ ಬಿದ್ದಿದೆ. ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮತ್ತು ಎಂಎಲ್ಸಿ ಎಚ್. ವಿಶ್ವನಾಥ್ ಅವರು ಮತ್ತೆ ಒಂದಾಗಿದ್ದಾರೆ.
ಜಿಲ್ಲೆಯ ಕೆ.ಆರ್ ನಗರದಲ್ಲಿರುವ ಎಚ್. ವಿಶ್ವನಾಥ್ ಅವರ ಮನೆಗೆ ಇಂದು (ಏ.೬) ಭೇಟಿ ನೀಡಿದ ಎಚ್.ಡಿ ಕುಮಾರಸ್ವಾಮಿ ಮುನಿಸು ಮರೆತು ಮುಖಾಮುಖಿಯಾಗಿದ್ದು, ಆತ್ಮೀಯತೆಯ ಮಾತುಕತೆ ನಡೆಸಿದ್ದಾರೆ. ನಂತರ ಎಚ್ಡಿಕೆ, ವಿಶ್ವನಾಥ್ ಅವರ ಗುಣಗಾನ ಮಾಡಿದ್ದಾರೆ.
ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್ಡಿಕೆ, ರಾಜಕೀಯ ಎಂದಮೇಲೆ ಟೀಕೆ ಟಿಪ್ಪಣಿಗಳು ಸಹಜವಾಗಿಯೇ ಇರುತ್ತದೆ. ನಾನು ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ತಿಳಿಯುತ್ತಿದ್ದಂತೆ ಕರೆ ಮಾಡಿ ಶುಭ ಕೋರಿದ್ದಾರೆ. ಎಲ್ಲ ಮನಸ್ಥಾಪಗಳನ್ನು ಮರೆತು ವಿಶ್ವಣ್ಣ ನಮಗೆ ಬೆಂಬಲ ಕೊಟ್ಟಿದ್ದಾರೆ ಎಂದರು.
ವಿಶ್ವಣ್ಣ ಅವರ ಅಭಿಮಾನಕ್ಕೆ ಸೋತು ನಾನು ಅವರ ಮನೆಗೆ ಬಂದಿದ್ದೇನೆ. ಅವರು ನೇರವಾಗಿ, ನಿಷ್ಠೂರವಾಗಿ ಮಾತನಾಡುವ ರಾಜಕಾರಣಿಯಾಗಿರುವ ಅವರು ಪ್ರಾಮಾಣಿಕರಾಗಿದ್ದಾರೆ. ಅವರ ಬೆಂಬಲಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ತಮ್ಮ ಆತ್ಮೀಯತೆಯನ್ನು ಮತ್ತೊಮ್ಮೆ ತೋರಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…