ಮೈಸೂರು: ಮಹಿಳೆಯರು ಕಾಂಗ್ರೆಸ್ ಗ್ಯಾರೆಂಟಿಗಳಿಂದ ದಾರಿ ತಪ್ಪುತ್ತಿದ್ದಾರೆ ಎಂದು ಇತ್ತೀಚೆಗೆ ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ ಹೇಳಿಕೆ ಮೈಸೂರಿನಲ್ಲಿಂದು (ಏ.೧೫) ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್ ಕಿಡಿಕಾರಿದ್ದಾರೆ.
ಗ್ಯಾರೆಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಮಹಿಳೆಯರು ಯಾವ ರೀತಿ ದಾರಿ ತಪ್ಪಿದ್ದಾರೆ ಎಂದು ಹೇಳಬೇಕು. ಎರಡು ಬಾರಿ ಸಿಎಂ ಆಗಿದ್ದವರು ಈ ರೀತಿ ದಾರಿ ತಪ್ಪಿಸುವ ಹೇಳಿಕೆ ನೀಡುವುದು ಸರಿಯಲ್ಲ. ಮನೆಗೆಲಸದ ಹೆಣ್ಮಕ್ಕಳಿಗೆ ಯಾವುದೇ ಭದ್ರತೆ ಇಲ್ಲ. ಇಂತಹ ಹೆಣ್ಮಕ್ಕಳಿಗೆ 2ಸಾವಿರ ರೂ ಕೊಡುವ ಕಾರ್ಯಕ್ರಮ ಗೃಹಲಕ್ಷ್ಮಿ ಯೋಜನೆ. ಹೆಣ್ಣು ಮಕ್ಕಳ ಬಗ್ಗೆ ಮಾತನಾಡುವ ಹಕ್ಕನ್ನ ಕುಮಾರಸ್ವಾಮಿಗೆ ಕೊಟ್ಟಿದ್ದು ಯಾರು ಎಂದು ವಾಗ್ದಾಳಿ ನಡೆಸಿದರು.
ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬರುವುದೇ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯವಾಗಿತ್ತು. 12 ನೆ ಶತಮಾನದಲ್ಲಿ ಬಸವಣ್ಣನವರು ಮಹಿಳೆಯರಿಗೆ ಸಮಾನತೆ ನೀಡಲಿಕ್ಕೆ ಮುಂದಾದರು. ಆದರೆ, ಮಾಜಿ ಸಿಎಂ ಕುಮಾರಸ್ವಾಮಿ ಇತ್ತೀಚಿನ ದಿನಗಳಲ್ಲಿ ದಾರಿ ತಪ್ಪಿದ ಮಗ ಆಗಿದ್ದಾರೆ. ನೆನ್ನೆ ಮಂಡ್ಯದಲ್ಲಿ ಗೋ ಬ್ಯಾಕ್ ಕುಮಾರಸ್ವಾಮಿ ಎಂದು ಪ್ರೊಟೆಸ್ಟ್ ನಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಆಕ್ರೋಶ ಹೊರ ಹಾಕಿದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…