ಮೈಸೂರು: ಮಹಿಳೆಯರು ಕಾಂಗ್ರೆಸ್ ಗ್ಯಾರೆಂಟಿಗಳಿಂದ ದಾರಿ ತಪ್ಪುತ್ತಿದ್ದಾರೆ ಎಂದು ಇತ್ತೀಚೆಗೆ ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ ಹೇಳಿಕೆ ಮೈಸೂರಿನಲ್ಲಿಂದು (ಏ.೧೫) ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್ ಕಿಡಿಕಾರಿದ್ದಾರೆ.
ಗ್ಯಾರೆಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಮಹಿಳೆಯರು ಯಾವ ರೀತಿ ದಾರಿ ತಪ್ಪಿದ್ದಾರೆ ಎಂದು ಹೇಳಬೇಕು. ಎರಡು ಬಾರಿ ಸಿಎಂ ಆಗಿದ್ದವರು ಈ ರೀತಿ ದಾರಿ ತಪ್ಪಿಸುವ ಹೇಳಿಕೆ ನೀಡುವುದು ಸರಿಯಲ್ಲ. ಮನೆಗೆಲಸದ ಹೆಣ್ಮಕ್ಕಳಿಗೆ ಯಾವುದೇ ಭದ್ರತೆ ಇಲ್ಲ. ಇಂತಹ ಹೆಣ್ಮಕ್ಕಳಿಗೆ 2ಸಾವಿರ ರೂ ಕೊಡುವ ಕಾರ್ಯಕ್ರಮ ಗೃಹಲಕ್ಷ್ಮಿ ಯೋಜನೆ. ಹೆಣ್ಣು ಮಕ್ಕಳ ಬಗ್ಗೆ ಮಾತನಾಡುವ ಹಕ್ಕನ್ನ ಕುಮಾರಸ್ವಾಮಿಗೆ ಕೊಟ್ಟಿದ್ದು ಯಾರು ಎಂದು ವಾಗ್ದಾಳಿ ನಡೆಸಿದರು.
ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬರುವುದೇ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯವಾಗಿತ್ತು. 12 ನೆ ಶತಮಾನದಲ್ಲಿ ಬಸವಣ್ಣನವರು ಮಹಿಳೆಯರಿಗೆ ಸಮಾನತೆ ನೀಡಲಿಕ್ಕೆ ಮುಂದಾದರು. ಆದರೆ, ಮಾಜಿ ಸಿಎಂ ಕುಮಾರಸ್ವಾಮಿ ಇತ್ತೀಚಿನ ದಿನಗಳಲ್ಲಿ ದಾರಿ ತಪ್ಪಿದ ಮಗ ಆಗಿದ್ದಾರೆ. ನೆನ್ನೆ ಮಂಡ್ಯದಲ್ಲಿ ಗೋ ಬ್ಯಾಕ್ ಕುಮಾರಸ್ವಾಮಿ ಎಂದು ಪ್ರೊಟೆಸ್ಟ್ ನಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಆಕ್ರೋಶ ಹೊರ ಹಾಕಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…