Mysore
23
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಅನಾರೋಗ್ಯ ಪೀಡಿತ ಮಹಿಳೆ ಕುಟುಂಬಕ್ಕೆ ಎಚ್.ಡಿ. ಕುಮಾರಸ್ವಾಮಿ ನೆರವು

ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ.

ನಂಜನಗೂಡು ತಾಲ್ಲೂಕಿ ಹುಲ್ಲಹಳ್ಳಿ ಗ್ರಾಮದ ಪೂಜಾ(೨೪) ಅವರು ದೀರ್ಘಕಾಲದಿಂದ ತೀವ್ರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಕುಟುಂಬವು ಆರ್ಥಿಕವಾಗಿ ಹಾಗೂ ಚಿಕಿತ್ಸೆಗಾಗಿ ತೊಂದರೆ ಅನುಭವಿಸುತ್ತಿತ್ತು. ಈ ವಿಷಯ ತಿಳಿದ ಕುಮಾರಸ್ವಾಮಿ ಅವರು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ, ಅವರ ಆರೋಗ್ಯ ಸ್ಥಿತಿ ಮತ್ತು ತೊಂದರೆಗಳ ಬಗ್ಗೆ ವಿಚಾರಿಸಿದರು.

ಕುಮಾರಸ್ವಾಮಿ ಅವರು ತಮ್ಮ ವೈಯಕ್ತಿಕ ನೆರವಿನಿಂದ ಆರ್ಥಿಕ ಸಹಾಯ ನೀಡಿದ್ದು, ಮಹಿಳೆಯ ಚಿಕಿತ್ಸೆಗೆ ಅಗತ್ಯವಾದ ವ್ಯವಸ್ಥೆ ಮಾಡಲು ಸೂಚನೆ ನೀಡಿದ್ದಾರೆ.

 

Tags:
error: Content is protected !!