ಮೈಸೂರು: ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವತು ತಮಗೆ ಇಷ್ಟಬಂದಂತೆ, ಅನುಕೂಲವಾಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ಕಾರಣ, ಪ್ರತಿ ಹಂತದಲ್ಲಿಯೂ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದೆ ಎಂದು ದೂರಿದರು.
ಈ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ನಮಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಜಮೀನು ತನಿಖೆಗೆ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಲಾಗಿದೆ. ಐವರು ಐಎಎಸ್ ಅಧಿಕಾರಿಗಳನ್ನು ಎಸ್ಐಟಿಗೆ ನೇಮಕ ಮಾಡಿದ್ದಾರೆ ಎಂದು ಕಟುವಾಗಿ ಟೀಕಿಸಿದರು.
೪೦ ವರ್ಷಗಳ ಹಿಂದೆ ನಾನು ಮೈಸೂರಿನಲ್ಲಿ ಸಿನಿಮಾ ಹಂಚಿಕೆದಾರನಾಗಿದ್ದಾಗ ಕಷ್ಟಪಟ್ಟು ಸಂಪಾದನೆ ಮಾಡಿದ ಜಮೀನು ಅದಾಗಿದೆ. ೧೪ ಎಕರೆ ಒತ್ತುವರಿಯಾಗಿದೆ ಎಂದು ಆರೋಪ ಮಾಡಿದ್ದಾರೆ. ನಾನು ಹಿಂದೆಯೇ ಅವರಿಗೆ ಪತ್ರ ಬರೆದು, ಸರ್ವೇ ಮಾಡಿಕೊಳ್ಳಿ, ಒತ್ತುವರಿ ಆಗಿದ್ದರೆ ವಾಪಸ್ ಪಡೆದುಕೊಳ್ಳಿ ಎಂದು ಹೇಳಿದ್ದೇನೆ. ತನಿಖೆ ನಡೆಸಿ ವಶಕ್ಕೆ ತೆಗೆದುಕೊಳ್ಳಿ ಎಂದು ಪತ್ರವನ್ನೇ ಬರೆದಿದ್ದೆ. ಆದರೆ, ನನ್ನ ಮನವಿ ಅಲಕ್ಷ್ಯ ಮಾಡಿ ೪೦ ವರ್ಷಗಳಿಂದ ನನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…