ಮೈಸೂರು: ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವತು ತಮಗೆ ಇಷ್ಟಬಂದಂತೆ, ಅನುಕೂಲವಾಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ಕಾರಣ, ಪ್ರತಿ ಹಂತದಲ್ಲಿಯೂ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದೆ ಎಂದು ದೂರಿದರು.
ಈ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ನಮಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಜಮೀನು ತನಿಖೆಗೆ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಲಾಗಿದೆ. ಐವರು ಐಎಎಸ್ ಅಧಿಕಾರಿಗಳನ್ನು ಎಸ್ಐಟಿಗೆ ನೇಮಕ ಮಾಡಿದ್ದಾರೆ ಎಂದು ಕಟುವಾಗಿ ಟೀಕಿಸಿದರು.
೪೦ ವರ್ಷಗಳ ಹಿಂದೆ ನಾನು ಮೈಸೂರಿನಲ್ಲಿ ಸಿನಿಮಾ ಹಂಚಿಕೆದಾರನಾಗಿದ್ದಾಗ ಕಷ್ಟಪಟ್ಟು ಸಂಪಾದನೆ ಮಾಡಿದ ಜಮೀನು ಅದಾಗಿದೆ. ೧೪ ಎಕರೆ ಒತ್ತುವರಿಯಾಗಿದೆ ಎಂದು ಆರೋಪ ಮಾಡಿದ್ದಾರೆ. ನಾನು ಹಿಂದೆಯೇ ಅವರಿಗೆ ಪತ್ರ ಬರೆದು, ಸರ್ವೇ ಮಾಡಿಕೊಳ್ಳಿ, ಒತ್ತುವರಿ ಆಗಿದ್ದರೆ ವಾಪಸ್ ಪಡೆದುಕೊಳ್ಳಿ ಎಂದು ಹೇಳಿದ್ದೇನೆ. ತನಿಖೆ ನಡೆಸಿ ವಶಕ್ಕೆ ತೆಗೆದುಕೊಳ್ಳಿ ಎಂದು ಪತ್ರವನ್ನೇ ಬರೆದಿದ್ದೆ. ಆದರೆ, ನನ್ನ ಮನವಿ ಅಲಕ್ಷ್ಯ ಮಾಡಿ ೪೦ ವರ್ಷಗಳಿಂದ ನನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…