ಮೈಸೂರು

ಡಿಸಿಎಂ ʻಡಿಕೆಶಿʼ ವಿರುದ್ಧ ʻಎಚ್‌ಡಿಕೆʼ ವಾಗ್ದಾಳಿ

ಮೈಸೂರು: ಯಡಿಯೂರಪ್ಪ ಹಾಗೂ ನನ್ನ ಟಾಕ್‌ವಾರ್‌ ರಾಜಕೀಯವಾದದ್ದು, ನನ್ನ ಮತ್ತು ಬಿಎಸ್‌ ಯಡಿಯೂರಪ್ಪ ವಿರುದ್ಧ ಬಿರುಕು ಮೂಡಿಸಲು ನಿನ್ನೆ ಇದೇ ಸ್ಥಳದಲ್ಲಿ ಹಳೆ ವಿಡಿಯೋ ತುಣುಕು ಬಿಡಿಗಡೆ ಮಾಡಿ ನಕ್ಕಿದ್ದೀರ. ಮಿಸ್ಟರ್‌ ಶಿವಕುಮಾರ್‌ ಇದು ಹೀಗೆ ಇರಲ್ಲ, ಅಧಿಕಾರವೂ ಕೂಡ ಶಾಶ್ವತವಲ್ಲಿ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ದ ಡೈರೆಕ್ಟ್‌ ಹಿಟ್‌ ಮಾಡಿದರು.

ಯಡಿಯೂರಪ್ಪ ನನಗೆ ನಾಗರಹಾವು ಎಂದಿದ್ದರು ನಿಜ. ಮಿಸ್ಟರ್‌ ಶಿವಕುಮಾರ್‌ ನಿನ್ನ ಪಾಲಿಗೆ ನಾನು ನಾಗರಹಾವು ಎಂದು ತಮ್ಮ ಭಾಷಣದ ಮಧ್ಯೆಯೆ ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಕಾಂಗ್ರೆಸ್‌ ನಾಯಕರ ವಿಡಿಯೋ ತುಣುಕು ಬಿಡುಗಡೆ ಮಾಡಿದರು.

ನನ್ನ ಅಧ್ಯಕ್ಷತೆಯಲ್ಲಿ 136 ಸೀಟು ಗೆದ್ದಿದೆ ಅಂತೇಳಿದ್ದಾರೆ. ನಿಮ್ಮದೆ ಅಧ್ಯಕ್ಷತೆಯಲ್ಲಿ ಮತ್ತೇಕೆ ಲೋಕಸಭೆ ಚುನಾವಣೆಯಲ್ಲಿ 28 ರಲ್ಲಿ 9 ಸ್ಥಾನ ಬಂತು. ಎಲ್ಲವೂ ನನಗೆ ಗೊತ್ತಿದೆ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಪರವಾಗಿ ಬಂಡೆಯಾಗಿ ನಿಂತಿದ್ದಾರಂತೆ, ಇದೇ ಮಾತನ್ನು ಈ ಹಿಂದೆ ನನಗೂ ಡಿಕೆ ಶಿವಕುಮಾರ್‌ ಹೇಳಿದ್ರು, ಆ ಬಂಡೆ ನಂಬಿದಕ್ಕೆ ನನ್ನ ತಲೆ ಮೇಲೆಯೇ ಬಂಡೆ ಬಿತ್ತು. ಇದೀಗ, ಆ ಬಂಡೆ ಸಿದ್ದರಾಮಯ್ಯರ ಪರವಾಗಿ ಇದೆಯಂತೆ, ಅವರ ಕಥೆ ಮುಗಿತು ಅನ್ಕೋಳಿ, ಬಂಡೆ ಸಿದ್ದರಾಮಯ್ಯ ಮೇಲೆ ಬಿದ್ದರೆ ಅವರ ಪರಿಸ್ಥಿತಿ ಏನಾಗಲಿದೆ ಎನ್ನುವುದು ಗೊತ್ತಿದೆ ಎಂದು ಡಿಕೆಶಿಗೆ ತಿರುಗೇಟು ನೀಡಿದರು.

ಸಿಡಿ ಶಿವು ಕಥೆ ಬೇರೆ, ಬೆಂಗಳೂರಲ್ಲಿ ಜೇಡರಹಳ್ಳಿ ಎಂತ ಇದೆ ಅಲ್ಲಿ ಬೇರೆ ಕಥೆ ಇದೆ. ಕೊತ್ವಾಲ್‌ ಅತ್ರ ಜೀವನ ಮಾಡ್ಕೊಂಡು ಇದ್ದೊರಿಗೆ ದೇವೇಗೌಡರ ಕುಟುಂಬದ ಆಸ್ತಿ ವಿವರಬೇಕಾ..?ಎಂದು ಗುಡುಗಿದರು.

ನಾನು ರಾಜಕೀಯ  ಶುರುಮಾಡಿದಾಗ ನಿಖಿಲ್‌ ಹುಟ್ಟಿರಲಿಲ್ಲ ಎಂದಿದ್ದಿರಾ, ಹೆಚ್‌ಡಿ ದೇವೇಗೌಡರು ಕಾವೇರಿ ವಿಚಾರಕ್ಕಾಗಿ ಹೋರಾಟ ಶುರು ಮಾಡಿದಾಗ ನೀವು ಹುಟ್ಟಿದ್ರ ಎಂದು ತಮ್ಮ ಭಾಷಣದ ಬುಹುತೇಕ ಸಮಯ ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ದ ವಾಗ್ದಾಳಿ ನಡೆಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

38 mins ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

2 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

2 hours ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

3 hours ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

3 hours ago

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

4 hours ago