ಮೈಸೂರು: ಯಡಿಯೂರಪ್ಪ ಹಾಗೂ ನನ್ನ ಟಾಕ್ವಾರ್ ರಾಜಕೀಯವಾದದ್ದು, ನನ್ನ ಮತ್ತು ಬಿಎಸ್ ಯಡಿಯೂರಪ್ಪ ವಿರುದ್ಧ ಬಿರುಕು ಮೂಡಿಸಲು ನಿನ್ನೆ ಇದೇ ಸ್ಥಳದಲ್ಲಿ ಹಳೆ ವಿಡಿಯೋ ತುಣುಕು ಬಿಡಿಗಡೆ ಮಾಡಿ ನಕ್ಕಿದ್ದೀರ. ಮಿಸ್ಟರ್ ಶಿವಕುಮಾರ್ ಇದು ಹೀಗೆ ಇರಲ್ಲ, ಅಧಿಕಾರವೂ ಕೂಡ ಶಾಶ್ವತವಲ್ಲಿ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಡೈರೆಕ್ಟ್ ಹಿಟ್ ಮಾಡಿದರು.
ಯಡಿಯೂರಪ್ಪ ನನಗೆ ನಾಗರಹಾವು ಎಂದಿದ್ದರು ನಿಜ. ಮಿಸ್ಟರ್ ಶಿವಕುಮಾರ್ ನಿನ್ನ ಪಾಲಿಗೆ ನಾನು ನಾಗರಹಾವು ಎಂದು ತಮ್ಮ ಭಾಷಣದ ಮಧ್ಯೆಯೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರ ವಿಡಿಯೋ ತುಣುಕು ಬಿಡುಗಡೆ ಮಾಡಿದರು.
ನನ್ನ ಅಧ್ಯಕ್ಷತೆಯಲ್ಲಿ 136 ಸೀಟು ಗೆದ್ದಿದೆ ಅಂತೇಳಿದ್ದಾರೆ. ನಿಮ್ಮದೆ ಅಧ್ಯಕ್ಷತೆಯಲ್ಲಿ ಮತ್ತೇಕೆ ಲೋಕಸಭೆ ಚುನಾವಣೆಯಲ್ಲಿ 28 ರಲ್ಲಿ 9 ಸ್ಥಾನ ಬಂತು. ಎಲ್ಲವೂ ನನಗೆ ಗೊತ್ತಿದೆ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ಪರವಾಗಿ ಬಂಡೆಯಾಗಿ ನಿಂತಿದ್ದಾರಂತೆ, ಇದೇ ಮಾತನ್ನು ಈ ಹಿಂದೆ ನನಗೂ ಡಿಕೆ ಶಿವಕುಮಾರ್ ಹೇಳಿದ್ರು, ಆ ಬಂಡೆ ನಂಬಿದಕ್ಕೆ ನನ್ನ ತಲೆ ಮೇಲೆಯೇ ಬಂಡೆ ಬಿತ್ತು. ಇದೀಗ, ಆ ಬಂಡೆ ಸಿದ್ದರಾಮಯ್ಯರ ಪರವಾಗಿ ಇದೆಯಂತೆ, ಅವರ ಕಥೆ ಮುಗಿತು ಅನ್ಕೋಳಿ, ಬಂಡೆ ಸಿದ್ದರಾಮಯ್ಯ ಮೇಲೆ ಬಿದ್ದರೆ ಅವರ ಪರಿಸ್ಥಿತಿ ಏನಾಗಲಿದೆ ಎನ್ನುವುದು ಗೊತ್ತಿದೆ ಎಂದು ಡಿಕೆಶಿಗೆ ತಿರುಗೇಟು ನೀಡಿದರು.
ಸಿಡಿ ಶಿವು ಕಥೆ ಬೇರೆ, ಬೆಂಗಳೂರಲ್ಲಿ ಜೇಡರಹಳ್ಳಿ ಎಂತ ಇದೆ ಅಲ್ಲಿ ಬೇರೆ ಕಥೆ ಇದೆ. ಕೊತ್ವಾಲ್ ಅತ್ರ ಜೀವನ ಮಾಡ್ಕೊಂಡು ಇದ್ದೊರಿಗೆ ದೇವೇಗೌಡರ ಕುಟುಂಬದ ಆಸ್ತಿ ವಿವರಬೇಕಾ..?ಎಂದು ಗುಡುಗಿದರು.
ನಾನು ರಾಜಕೀಯ ಶುರುಮಾಡಿದಾಗ ನಿಖಿಲ್ ಹುಟ್ಟಿರಲಿಲ್ಲ ಎಂದಿದ್ದಿರಾ, ಹೆಚ್ಡಿ ದೇವೇಗೌಡರು ಕಾವೇರಿ ವಿಚಾರಕ್ಕಾಗಿ ಹೋರಾಟ ಶುರು ಮಾಡಿದಾಗ ನೀವು ಹುಟ್ಟಿದ್ರ ಎಂದು ತಮ್ಮ ಭಾಷಣದ ಬುಹುತೇಕ ಸಮಯ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ವಾಗ್ದಾಳಿ ನಡೆಸಿದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…