ಮೈಸೂರು

ನಾಲ್ಕನೇ ದಿನದ ಕಾಂಗ್ರೆಸ್ ಪಾದಯಾತ್ರೆ ಆರಂಭ

ಮೈಸೂರು: ಮೂರನೇ ದಿನದ ಯಾತ್ರೆ ಬಂಡೀಪಾಳ್ಯದಲ್ಲಿ ಅಂತ್ಯವಾಗಿದ್ದು ದೊಡ್ಡಕೆರೆ ಮೈದಾನದಲ್ಲಿ ರಾಹುಲ್‌ ತಂಡ  ವಾಸ್ತವ್ಯ ಆಗಿದರು. ಪಕ್ಕದಲ್ಲೇ ಇದ್ದ ರಾಜಮನೆತನದವರನ್ನು ಬೇಡಿ ಮಾಡುತ್ತಾರೆಂಬ ನಿರೀಕ್ಷೆಯಿದ್ದು ಅದು ಕನಸಾಗಿಯೇ ಉಳಿಯಿತು. ನಂತರ ಭಾರತ ಐಕ್ಯತಾ ಯಾತ್ರೆ ನೇತಾರ ರಾಹುಲ್ ಗಾಂಧಿ ಅವರು ಮೈಸೂರಿನ ಸುತ್ತೂರು ಮಠಕ್ಕೆ ಸೋಮವಾರ ತೆರಳಿ ಶ್ರೀ ಶಿವರಾತ್ರಿಶ್ವರ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ಇದ್ದರು.

ಭಾರತ್ ಜೋಡೋ ಯಾತ್ರೆ ನಾಲ್ಕನೇ ದಿನದ ಪಾದಯಾತ್ರೆ ಆರಂಭಗೊಂಡಿದೆ. ಸೋಮವಾರ ಬೆಳಗ್ಗೆ ಮೈಸೂರಿನ ಆರ್ ಗೇಟ್ ನಿಂದ ಪಾದಯಾತ್ರೆ ಆರಂಭಗೊಂಡಿದೆ. ಬೆಳಗಿನ ಜಾವ 6:30 ಕ್ಕೆ ಪಾದಯಾತ್ರೆ ಆರಂಭವಾಗಿದೆ. ನಾಲ್ಕನೇ ದಿನ ಸೋಮವಾರ ರಾಹುಲ್ ಗಾಂಧಿ 12 ಕಿ.ಮೀ ಹೆಜ್ಜೆ ಹಾಕಲಿದ್ದಾರೆ. 9:30 ಕ್ಕೆಶ್ರೀರಂಗಪಟ್ಟಣದ ಅಗ್ರಹಾರದಲ್ಲಿ ಬೆಳಗ್ಗಿನ ವಿರಾಮ ಇರಲಿದೆ. ಶ್ರೀರಂಗಪಟ್ಟಣದ ಪರಿವರ್ತನಾ ಸ್ಕೂಲ್ ನಲ್ಲಿ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ.

ಮಧ್ಯಾಹ್ನ 2 ಕ್ಕೆ ಮತ್ತೆ ಪಾದಯಾತ್ರೆ ಶ್ರೀರಂಗಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಳ್ಳಲಿದೆ. ಸಂಜೆ 4:30 ಕ್ಕೆ ಪಾದಯಾತ್ರೆ ಮುಕ್ತಾಯಗೊಳ್ಳಿದ್ದು, ಪಾಂಡವಪುರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪಾದಯಾತ್ರೆ ಮುಕ್ತಾಯವಾಗಲಿದೆ.

ಮಧ್ಯಾಹ್ನ 10 ಕಿ.ಮೀ ಪಾದಯಾತ್ರೆ ನಡೆಯಲಿದ್ದು, ರಾತ್ರಿ ಜೆಎಸ್ಎಸ್ ಗ್ರೌಂಡ್ ನಲ್ಲಿ ರಾಹುಲ್ ವಾಸ್ತವ್ಯ ಹೂಡಲಿದ್ದಾರೆ. ಸೋನಿಯಾ ಗಾಂಧಿ ಮೈಸೂರಿಗೆ ಆಗಮನದ ಹಿನ್ನೆಲೆಯಲ್ಲಿ ಸಂಜೆ 4:30 ಕ್ಕೆ ಪಾದಯಾತ್ರೆ ಮುಕ್ತಾಯ ಆಗಲಿದೆ. ಬಳಿಕ ರಾಹುಲ್ ಕೊಡಗಿಗೆ ತೆರಳುವ ಸಾಧ್ಯತೆ ಇದೆ.

ಎರಡು ದಿನ ಬ್ರೇಕ್ : ಮಂಗಳವಾರ ಹಾಗೂ ಬುಧವಾರ ದಸರಾ ರಜೆ ಇರುವ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ಬ್ರೇಕ್ ಇರಲಿದೆ. ಗುರುವಾರ ಮತ್ತೆ ಪಾದಯಾತ್ರೆ ಆರಂಭಗೊಳ್ಳಲಿದೆ.

ಕಪ್ಪು ಬಾವುಟ ಪ್ರದರ್ಶನ ಸಾಧ್ಯತೆಖಾಕಿ ಫುಲ್ ಅಲರ್ಟ್ : ಮೈಸೂರಲ್ಲಿ ರಾಹುಲ್ ಗೆ ಕಪ್ಪು ಭಾವುಟ ಪ್ರದರ್ಶನ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಹುಲ್ ಪಾದಯಾತ್ರೆಗೆ ಫುಲ್ ಸೆಕ್ಯೂರಿಟಿ ನೀಡಲಾಗಿದೆ. ಭದ್ರತೆಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ರಾಹುಲ್ ಸುತ್ತಮುತ್ತ 500ಕ್ಕೂ ಹೆಚ್ಚು ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ

 

andolana

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

3 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

3 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

6 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

7 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

8 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

8 hours ago