ಶ್ರೀಧರ್ ಆರ್ ಭಟ್
ನಂಜನಗೂಡು: ಸರ್ಕಾರಿ ಶಾಲೆಯ ಮಕ್ಕಳ ಜೀವದ ಜೊತೆ ಶಿಕ್ಷಕರೇ ಚೆಲ್ಲಾಟವಾಡುತ್ತಿರುವ ಘಟನೆಯೊಂದು ನಂಜನಗೂಡು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಕಿಗೆ ಬಂದಿದೆ.
ಶಾಲೆಯ ಸಂಪ್ನಿಂದ ಪುಟ್ಟ ಮಕ್ಕಳು ಬಿಂದಿಗೆಯಿಂದ ನೀರನ್ನು ಹೊರತೆಗೆದು ಬಳಕೆ ಮಾಡುತ್ತಿದ್ದಾರೆ. ಶಾಲೆಯ ಸಿಬ್ಬಂದಿಗಳು ಮಾಡಬೇಕಾದ ಇಂತಹ ಕೆಲಸಗಳನ್ನ ಮಕ್ಕಳ ಕೈಲಿ ಮಾಡಿಸುತ್ತಿದ್ದಾರೆ. ಸುಮಾರು 10 ಅಡಿ ಆಳವಿರುವ ಸಂಪ್ನಿಂದ ಮಕ್ಕಳು ಬಿಂದಿಗೆಯಲ್ಲಿ ನೀರು ತೆಗೆಯುತ್ತಿದ್ದಾರೆ. ಆಯ ತಪ್ಪಿದರೂ ಅನಾಹುತ ಆಗುವುದು ಗ್ಯಾರಂಟಿ. ಈ ಶಾಲೆಯಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಇಲ್ಲಿ ಇಂತಹ ಕೆಲಸಗಳ ನಿರ್ವಹಣೆಗೆ ಕೆಲಸಗಾರರನ್ನೇ ನಿಯೋಜಿಸಿಲ್ಲ. ಹೀಗಾಗಿ ಮಕ್ಕಳಿಂದಲೇ ಕೆಲಸ ಮಾಡಿಸುವ ಪರಿಸ್ಥಿತಿ ಎದುರಾಗಿದೆ.
ಇನ್ನು ಇಷ್ಟೆಲ್ಲಾ ನಡೆಯುತ್ತಿದ್ದರೂ ಈ ಬಗ್ಗೆ ಯಾರೂ ಸಹ ತಲೆ ಕೆಡಿಸಿಕೊಳ್ಳುತ್ತಿಲ್ಲ. ಮುಖ್ಯಶಿಕ್ಷಕಿ ಸೇರಿದಂತೆ 5 ಮಂದಿ ಇಲ್ಲಿ ಶಿಕ್ಷಕಿಯರಿದ್ದು, ಮಕ್ಕಳಿಂದ ಅಪಾಯಕ್ಕೆ ಆಹ್ವಾನ ನೀಡುವ ಕೆಲಸಗಳನ್ನ ಮಾಡಿಸಲು ಅನುಮತಿ ನೀಡಿದವರು ಯಾರು..? ಮುಖ್ಯ ಶಿಕ್ಷಕಿಗೆ ಈ ದೃಶ್ಯಗಳು ಕಂಡು ಬರುತ್ತಿಲ್ಲವೇ..? ಅನಾಹುತ ನಡೆದರೆ ಹೊಣೆ ಯಾರದ್ದು…? ಎಂಬ ಪ್ರಶ್ನೆಗಳು ಉದ್ಭವಿಸಿವೆ. ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸಿದ ಕ್ಷೇತ್ರದಲ್ಲೇ ಇಂತಹ ಘಟನೆಗಳು ನಡೆಯುತ್ತಿದ್ದರೂ ಶಿಕ್ಷಣ ಇಲಾಖೆ ಜಾಣ ಕುರುಡುತನ ಪ್ರದರ್ಶಿಸುತ್ತಿದೆ. ಕೂಡಲೇ ಹಿರಿಯ ಅಧಿಕಾರಿಗಳು ಇತ್ತ ಗಮನಹರಿಸಿ ಮಕ್ಕಳ ರಕ್ಷಣೆಗೆ ಮುಂದಾಗಬೇಕಿದೆ. ಇದಕ್ಕೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಂದು, ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ.
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…