ಮೈಸೂರು

ಮುಖ್ಯ ಶಿಕ್ಷಕಿ ನಿರ್ಲಕ್ಷ್ಯ: ಸಂಪ್‌ನಿಂದ ನೀರೆತ್ತುವ ಮಕ್ಕಳು

ಶ್ರೀಧರ್‌ ಆರ್ ಭಟ್‌

ನಂಜನಗೂಡು: ಸರ್ಕಾರಿ ಶಾಲೆಯ ಮಕ್ಕಳ ಜೀವದ ಜೊತೆ ಶಿಕ್ಷಕರೇ ಚೆಲ್ಲಾಟವಾಡುತ್ತಿರುವ ಘಟನೆಯೊಂದು ನಂಜನಗೂಡು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಕಿಗೆ ಬಂದಿದೆ.

ಶಾಲೆಯ ಸಂಪ್‌ನಿಂದ ಪುಟ್ಟ ಮಕ್ಕಳು ಬಿಂದಿಗೆಯಿಂದ ನೀರನ್ನು ಹೊರತೆಗೆದು ಬಳಕೆ ಮಾಡುತ್ತಿದ್ದಾರೆ. ಶಾಲೆಯ ಸಿಬ್ಬಂದಿಗಳು ಮಾಡಬೇಕಾದ ಇಂತಹ ಕೆಲಸಗಳನ್ನ ಮಕ್ಕಳ ಕೈಲಿ ಮಾಡಿಸುತ್ತಿದ್ದಾರೆ. ಸುಮಾರು 10 ಅಡಿ ಆಳವಿರುವ ಸಂಪ್‌ನಿಂದ ಮಕ್ಕಳು ಬಿಂದಿಗೆಯಲ್ಲಿ ನೀರು ತೆಗೆಯುತ್ತಿದ್ದಾರೆ. ಆಯ ತಪ್ಪಿದರೂ ಅನಾಹುತ ಆಗುವುದು ಗ್ಯಾರಂಟಿ. ಈ ಶಾಲೆಯಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಇಲ್ಲಿ ಇಂತಹ ಕೆಲಸಗಳ ನಿರ್ವಹಣೆಗೆ ಕೆಲಸಗಾರರನ್ನೇ ನಿಯೋಜಿಸಿಲ್ಲ. ಹೀಗಾಗಿ ಮಕ್ಕಳಿಂದಲೇ ಕೆಲಸ ಮಾಡಿಸುವ ಪರಿಸ್ಥಿತಿ ಎದುರಾಗಿದೆ.

ಇನ್ನು ಇಷ್ಟೆಲ್ಲಾ ನಡೆಯುತ್ತಿದ್ದರೂ ಈ ಬಗ್ಗೆ ಯಾರೂ ಸಹ ತಲೆ ಕೆಡಿಸಿಕೊಳ್ಳುತ್ತಿಲ್ಲ. ಮುಖ್ಯಶಿಕ್ಷಕಿ ಸೇರಿದಂತೆ 5 ಮಂದಿ ಇಲ್ಲಿ ಶಿಕ್ಷಕಿಯರಿದ್ದು, ಮಕ್ಕಳಿಂದ ಅಪಾಯಕ್ಕೆ ಆಹ್ವಾನ ನೀಡುವ ಕೆಲಸಗಳನ್ನ ಮಾಡಿಸಲು ಅನುಮತಿ ನೀಡಿದವರು ಯಾರು..? ಮುಖ್ಯ ಶಿಕ್ಷಕಿಗೆ ಈ ದೃಶ್ಯಗಳು ಕಂಡು ಬರುತ್ತಿಲ್ಲವೇ..? ಅನಾಹುತ ನಡೆದರೆ ಹೊಣೆ ಯಾರದ್ದು…? ಎಂಬ ಪ್ರಶ್ನೆಗಳು ಉದ್ಭವಿಸಿವೆ. ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸಿದ ಕ್ಷೇತ್ರದಲ್ಲೇ ಇಂತಹ ಘಟನೆಗಳು ನಡೆಯುತ್ತಿದ್ದರೂ ಶಿಕ್ಷಣ ಇಲಾಖೆ ಜಾಣ ಕುರುಡುತನ ಪ್ರದರ್ಶಿಸುತ್ತಿದೆ. ಕೂಡಲೇ ಹಿರಿಯ ಅಧಿಕಾರಿಗಳು ಇತ್ತ ಗಮನಹರಿಸಿ ಮಕ್ಕಳ ರಕ್ಷಣೆಗೆ ಮುಂದಾಗಬೇಕಿದೆ. ಇದಕ್ಕೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಂದು, ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ.

 

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

57 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

1 hour ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

1 hour ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago