ಮೈಸೂರು

ಹೃದಯಾಘಾತ : ಆತಂಕ ಬೇಡ ಎಂದ ಜಯದೇವ ನಿರ್ದೇಶಕ ಸದಾನಂದ

ಮೈಸೂರು : ಸಣ್ಣಪುಟ್ಟ ಎದೆನೋವಿಗೆ ಆತಂಕಕ್ಕೊಳಗಾಗಿ ಹೃದ್ರೋಗ ಆಸ್ಪತ್ರೆಗೆ ಆಗಮಿಸುವ ಅಗತ್ಯವಿಲ್ಲ ಎಂದು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಕೆ.ಎಸ್.ಸದಾನಂದ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಾಸನದಲ್ಲಿ ಸರಣಿ ಹೃದ್ರೋಗ ಪ್ರಕರಣಗಳ ಹಿನ್ನೆಲೆಯಲ್ಲಿ ಆತಂಕಗೊಂಡ ಜನ ತಪಾಸಣೆಗೆ ಬರುವವರ ಸಂಖ್ಯೆ ಹೆಚ್ಚಿದೆ. ಸಣ್ಣಪುಟ್ಟ ಸಮಸ್ಯೆಗಳಿಗೂ ಬರುವವರ ಸಂಖ್ಯೆ ಅಧಿಕವಾದಾಗ ತಪಾಸಣೆ ಮಾಡುವ ವೈದ್ಯರು ಸಿನಿಕತನಕ್ಕೆ ಒಳಗಾಗುತ್ತಾರೆ. ನಿಜವಾದ ರೋಗಿಯ ತಪಾಸಣೆಯ ಮೇಲೂ ಅದು ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದ್ದಾರೆ.

ಎದೆನೋವಿಗೆ ನಾನಾ ರೀತಿಯ ಕಾರಣಗಳಿರಬಹುದು. ಎಲ್ಲವೂ ಹೃದಯದ ಸಮಸ್ಯೆ ಎಂದೇ ಭಾವಿಸಬೇಕಿಲ್ಲ. ಇಸಿಜಿ ಅಥವಾ ಟ್ರೊಪೊನಿನ್ ಎಂಬ ಸಣ್ಣ ರಕ್ತ ಪರೀಕ್ಷೆಯಿಂದ ಹೃದಯ ಸಮಸ್ಯೆ ಬಗ್ಗೆ ನಿರ್ಧರಿಸಬಹುದು. ಅಲ್ಲಿ ತೊಂದರೆ ಇದ್ದರೆ ಮಾತ್ರ ತಜ್ಞವೈದ್ಯರ ಬಳಿ ಬಂದರೆ ಆಗ ಚಿಕಿತ್ಸೆ ನೀಡಲು ಸುಲಭವಾಗುತ್ತದೆ. ನೇರವಾಗಿ ಜಯದೇವ ಸಂಸ್ಥೆಗೆ ಬಂದರೆ ಎಲ್ಲರನ್ನೂ ತಪಾಸಣೆಗೊಳಪಡಿಸಲು ಕಷ್ಟ ಎಂದರು.

ಹಾಸನ ಜಿಲ್ಲೆಯಲ್ಲಿ ಮಾತ್ರ ಈ ಸಮಸ್ಯೆ ಇಲ್ಲ. ಎಲ್ಲಾ ಕಡೆ ಇದೆ. ರೆಫರಲ್ ಕೇಂದ್ರಗಳಲ್ಲಿ ಎಕೊ, ಟಿಎಂಟಿಯಂತಹ ಸೌಲಭ್ಯಗಳನ್ನು ಅಳವಡಿಸುವ ಮೂಲಕ ಪ್ರಾಥಮಿಕ ಹಂತದಲ್ಲೇ ತಪಾಸಣೆಯನ್ನು ಸರಳೀಕರಿಸಲು ಸಾಧ್ಯವಿದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ಸಾಮಾನ್ಯವಾಗಿ ಮೈಸೂರಿನಲ್ಲಿ 700 ಜನರ ತಪಾಸಣೆ ನಡೆಯುತ್ತಿತ್ತು. ಈಗ 1000 ಮಂದಿಯ ತಪಾಸಣೆ ಮಾಡುತ್ತಿದ್ದೇವೆ. ಆದರೂ ಸಾಲುತ್ತಿಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

8 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

8 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

9 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

9 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

10 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

10 hours ago