Increasing heart attacks Youth group at Jayadeva Heart Hospital
ಮೈಸೂರು : ಸಣ್ಣಪುಟ್ಟ ಎದೆನೋವಿಗೆ ಆತಂಕಕ್ಕೊಳಗಾಗಿ ಹೃದ್ರೋಗ ಆಸ್ಪತ್ರೆಗೆ ಆಗಮಿಸುವ ಅಗತ್ಯವಿಲ್ಲ ಎಂದು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಕೆ.ಎಸ್.ಸದಾನಂದ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಾಸನದಲ್ಲಿ ಸರಣಿ ಹೃದ್ರೋಗ ಪ್ರಕರಣಗಳ ಹಿನ್ನೆಲೆಯಲ್ಲಿ ಆತಂಕಗೊಂಡ ಜನ ತಪಾಸಣೆಗೆ ಬರುವವರ ಸಂಖ್ಯೆ ಹೆಚ್ಚಿದೆ. ಸಣ್ಣಪುಟ್ಟ ಸಮಸ್ಯೆಗಳಿಗೂ ಬರುವವರ ಸಂಖ್ಯೆ ಅಧಿಕವಾದಾಗ ತಪಾಸಣೆ ಮಾಡುವ ವೈದ್ಯರು ಸಿನಿಕತನಕ್ಕೆ ಒಳಗಾಗುತ್ತಾರೆ. ನಿಜವಾದ ರೋಗಿಯ ತಪಾಸಣೆಯ ಮೇಲೂ ಅದು ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದ್ದಾರೆ.
ಎದೆನೋವಿಗೆ ನಾನಾ ರೀತಿಯ ಕಾರಣಗಳಿರಬಹುದು. ಎಲ್ಲವೂ ಹೃದಯದ ಸಮಸ್ಯೆ ಎಂದೇ ಭಾವಿಸಬೇಕಿಲ್ಲ. ಇಸಿಜಿ ಅಥವಾ ಟ್ರೊಪೊನಿನ್ ಎಂಬ ಸಣ್ಣ ರಕ್ತ ಪರೀಕ್ಷೆಯಿಂದ ಹೃದಯ ಸಮಸ್ಯೆ ಬಗ್ಗೆ ನಿರ್ಧರಿಸಬಹುದು. ಅಲ್ಲಿ ತೊಂದರೆ ಇದ್ದರೆ ಮಾತ್ರ ತಜ್ಞವೈದ್ಯರ ಬಳಿ ಬಂದರೆ ಆಗ ಚಿಕಿತ್ಸೆ ನೀಡಲು ಸುಲಭವಾಗುತ್ತದೆ. ನೇರವಾಗಿ ಜಯದೇವ ಸಂಸ್ಥೆಗೆ ಬಂದರೆ ಎಲ್ಲರನ್ನೂ ತಪಾಸಣೆಗೊಳಪಡಿಸಲು ಕಷ್ಟ ಎಂದರು.
ಹಾಸನ ಜಿಲ್ಲೆಯಲ್ಲಿ ಮಾತ್ರ ಈ ಸಮಸ್ಯೆ ಇಲ್ಲ. ಎಲ್ಲಾ ಕಡೆ ಇದೆ. ರೆಫರಲ್ ಕೇಂದ್ರಗಳಲ್ಲಿ ಎಕೊ, ಟಿಎಂಟಿಯಂತಹ ಸೌಲಭ್ಯಗಳನ್ನು ಅಳವಡಿಸುವ ಮೂಲಕ ಪ್ರಾಥಮಿಕ ಹಂತದಲ್ಲೇ ತಪಾಸಣೆಯನ್ನು ಸರಳೀಕರಿಸಲು ಸಾಧ್ಯವಿದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ಸಾಮಾನ್ಯವಾಗಿ ಮೈಸೂರಿನಲ್ಲಿ 700 ಜನರ ತಪಾಸಣೆ ನಡೆಯುತ್ತಿತ್ತು. ಈಗ 1000 ಮಂದಿಯ ತಪಾಸಣೆ ಮಾಡುತ್ತಿದ್ದೇವೆ. ಆದರೂ ಸಾಲುತ್ತಿಲ್ಲ ಎಂದು ಹೇಳಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…