ಮೈಸೂರು

ಹೃದಯಾಘಾತ : ಆತಂಕ ಬೇಡ ಎಂದ ಜಯದೇವ ನಿರ್ದೇಶಕ ಸದಾನಂದ

ಮೈಸೂರು : ಸಣ್ಣಪುಟ್ಟ ಎದೆನೋವಿಗೆ ಆತಂಕಕ್ಕೊಳಗಾಗಿ ಹೃದ್ರೋಗ ಆಸ್ಪತ್ರೆಗೆ ಆಗಮಿಸುವ ಅಗತ್ಯವಿಲ್ಲ ಎಂದು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಕೆ.ಎಸ್.ಸದಾನಂದ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಾಸನದಲ್ಲಿ ಸರಣಿ ಹೃದ್ರೋಗ ಪ್ರಕರಣಗಳ ಹಿನ್ನೆಲೆಯಲ್ಲಿ ಆತಂಕಗೊಂಡ ಜನ ತಪಾಸಣೆಗೆ ಬರುವವರ ಸಂಖ್ಯೆ ಹೆಚ್ಚಿದೆ. ಸಣ್ಣಪುಟ್ಟ ಸಮಸ್ಯೆಗಳಿಗೂ ಬರುವವರ ಸಂಖ್ಯೆ ಅಧಿಕವಾದಾಗ ತಪಾಸಣೆ ಮಾಡುವ ವೈದ್ಯರು ಸಿನಿಕತನಕ್ಕೆ ಒಳಗಾಗುತ್ತಾರೆ. ನಿಜವಾದ ರೋಗಿಯ ತಪಾಸಣೆಯ ಮೇಲೂ ಅದು ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದ್ದಾರೆ.

ಎದೆನೋವಿಗೆ ನಾನಾ ರೀತಿಯ ಕಾರಣಗಳಿರಬಹುದು. ಎಲ್ಲವೂ ಹೃದಯದ ಸಮಸ್ಯೆ ಎಂದೇ ಭಾವಿಸಬೇಕಿಲ್ಲ. ಇಸಿಜಿ ಅಥವಾ ಟ್ರೊಪೊನಿನ್ ಎಂಬ ಸಣ್ಣ ರಕ್ತ ಪರೀಕ್ಷೆಯಿಂದ ಹೃದಯ ಸಮಸ್ಯೆ ಬಗ್ಗೆ ನಿರ್ಧರಿಸಬಹುದು. ಅಲ್ಲಿ ತೊಂದರೆ ಇದ್ದರೆ ಮಾತ್ರ ತಜ್ಞವೈದ್ಯರ ಬಳಿ ಬಂದರೆ ಆಗ ಚಿಕಿತ್ಸೆ ನೀಡಲು ಸುಲಭವಾಗುತ್ತದೆ. ನೇರವಾಗಿ ಜಯದೇವ ಸಂಸ್ಥೆಗೆ ಬಂದರೆ ಎಲ್ಲರನ್ನೂ ತಪಾಸಣೆಗೊಳಪಡಿಸಲು ಕಷ್ಟ ಎಂದರು.

ಹಾಸನ ಜಿಲ್ಲೆಯಲ್ಲಿ ಮಾತ್ರ ಈ ಸಮಸ್ಯೆ ಇಲ್ಲ. ಎಲ್ಲಾ ಕಡೆ ಇದೆ. ರೆಫರಲ್ ಕೇಂದ್ರಗಳಲ್ಲಿ ಎಕೊ, ಟಿಎಂಟಿಯಂತಹ ಸೌಲಭ್ಯಗಳನ್ನು ಅಳವಡಿಸುವ ಮೂಲಕ ಪ್ರಾಥಮಿಕ ಹಂತದಲ್ಲೇ ತಪಾಸಣೆಯನ್ನು ಸರಳೀಕರಿಸಲು ಸಾಧ್ಯವಿದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ಸಾಮಾನ್ಯವಾಗಿ ಮೈಸೂರಿನಲ್ಲಿ 700 ಜನರ ತಪಾಸಣೆ ನಡೆಯುತ್ತಿತ್ತು. ಈಗ 1000 ಮಂದಿಯ ತಪಾಸಣೆ ಮಾಡುತ್ತಿದ್ದೇವೆ. ಆದರೂ ಸಾಲುತ್ತಿಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

13 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

13 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

18 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago