Increasing heart attacks Youth group at Jayadeva Heart Hospital
ಮೈಸೂರು : ಸಣ್ಣಪುಟ್ಟ ಎದೆನೋವಿಗೆ ಆತಂಕಕ್ಕೊಳಗಾಗಿ ಹೃದ್ರೋಗ ಆಸ್ಪತ್ರೆಗೆ ಆಗಮಿಸುವ ಅಗತ್ಯವಿಲ್ಲ ಎಂದು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಕೆ.ಎಸ್.ಸದಾನಂದ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಾಸನದಲ್ಲಿ ಸರಣಿ ಹೃದ್ರೋಗ ಪ್ರಕರಣಗಳ ಹಿನ್ನೆಲೆಯಲ್ಲಿ ಆತಂಕಗೊಂಡ ಜನ ತಪಾಸಣೆಗೆ ಬರುವವರ ಸಂಖ್ಯೆ ಹೆಚ್ಚಿದೆ. ಸಣ್ಣಪುಟ್ಟ ಸಮಸ್ಯೆಗಳಿಗೂ ಬರುವವರ ಸಂಖ್ಯೆ ಅಧಿಕವಾದಾಗ ತಪಾಸಣೆ ಮಾಡುವ ವೈದ್ಯರು ಸಿನಿಕತನಕ್ಕೆ ಒಳಗಾಗುತ್ತಾರೆ. ನಿಜವಾದ ರೋಗಿಯ ತಪಾಸಣೆಯ ಮೇಲೂ ಅದು ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದ್ದಾರೆ.
ಎದೆನೋವಿಗೆ ನಾನಾ ರೀತಿಯ ಕಾರಣಗಳಿರಬಹುದು. ಎಲ್ಲವೂ ಹೃದಯದ ಸಮಸ್ಯೆ ಎಂದೇ ಭಾವಿಸಬೇಕಿಲ್ಲ. ಇಸಿಜಿ ಅಥವಾ ಟ್ರೊಪೊನಿನ್ ಎಂಬ ಸಣ್ಣ ರಕ್ತ ಪರೀಕ್ಷೆಯಿಂದ ಹೃದಯ ಸಮಸ್ಯೆ ಬಗ್ಗೆ ನಿರ್ಧರಿಸಬಹುದು. ಅಲ್ಲಿ ತೊಂದರೆ ಇದ್ದರೆ ಮಾತ್ರ ತಜ್ಞವೈದ್ಯರ ಬಳಿ ಬಂದರೆ ಆಗ ಚಿಕಿತ್ಸೆ ನೀಡಲು ಸುಲಭವಾಗುತ್ತದೆ. ನೇರವಾಗಿ ಜಯದೇವ ಸಂಸ್ಥೆಗೆ ಬಂದರೆ ಎಲ್ಲರನ್ನೂ ತಪಾಸಣೆಗೊಳಪಡಿಸಲು ಕಷ್ಟ ಎಂದರು.
ಹಾಸನ ಜಿಲ್ಲೆಯಲ್ಲಿ ಮಾತ್ರ ಈ ಸಮಸ್ಯೆ ಇಲ್ಲ. ಎಲ್ಲಾ ಕಡೆ ಇದೆ. ರೆಫರಲ್ ಕೇಂದ್ರಗಳಲ್ಲಿ ಎಕೊ, ಟಿಎಂಟಿಯಂತಹ ಸೌಲಭ್ಯಗಳನ್ನು ಅಳವಡಿಸುವ ಮೂಲಕ ಪ್ರಾಥಮಿಕ ಹಂತದಲ್ಲೇ ತಪಾಸಣೆಯನ್ನು ಸರಳೀಕರಿಸಲು ಸಾಧ್ಯವಿದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ಸಾಮಾನ್ಯವಾಗಿ ಮೈಸೂರಿನಲ್ಲಿ 700 ಜನರ ತಪಾಸಣೆ ನಡೆಯುತ್ತಿತ್ತು. ಈಗ 1000 ಮಂದಿಯ ತಪಾಸಣೆ ಮಾಡುತ್ತಿದ್ದೇವೆ. ಆದರೂ ಸಾಲುತ್ತಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…