Mysore
20
overcast clouds
Light
Dark

ಔಷಧಿ ಕೊಳ್ಳಲು ಮೆಡಿಕಲ್ ಸ್ಟೋರ್‌ಗೆ ಹೋದಾಗ ಹೃದಯಾಘಾತ : ವ್ಯಕ್ತಿ ಸಾವು

ಮೈಸೂರು : ಔಷಧಿ ಕೊಳ್ಳಲು ಮೆಡಿಕಲ್‌ ಸ್ಟೋರ್‌ಗೆ ಹೋಗಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಕ್ಯಾತಮಾರನಹಳ್ಳಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಜಗದೀಶ್ (38) ಮೃತ ವ್ಯಕ್ತಿ. ಉದಯಗಿರಿಯ ಮೆಡಿಕಲ್ ಸ್ಟೋರ್‌ಗೆ ಔಷಧಿ ಕೊಳ್ಳಲು ಹೋಗಿದ್ದಾಗ ಜಗದೀಶ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ಇದಕ್ಕೆ ಸಂಬಂಧಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಜಗದೀಶ್ ಮೆಡಿಕಲ್ ಸ್ಟೋರ್‌ಗೆ ಔಷಧಿ ಕೊಳ್ಳಲು ಬಂದಿದ್ದರು. ಜಗದೀಶ್ ನೋವಿನ ಹಿನ್ನೆಲೆ ತಮ್ಮ ಎದೆಗೆ ಕೈಹಿಡಿದುಕೊಂಡು ಬಂದಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಮೆಡಿಕಲ್ ಸಿಬ್ಬಂದಿ ಜಗದೀಶ್ ಅವರನ್ನು ವಿಚಾರಿಸುತ್ತಿದ್ದ ವೇಳೆಯೇ ಏಕಾಏಕಿ ಕುಸಿದು ಬಿದ್ದಿದ್ದಾರೆ.

ತಕ್ಷಣ ಮೆಡಿಕಲ್ ಸಿಬ್ಬಂದಿ ಜಗದೀಶ್ ಕಡೆಗೆ ಓಡಿ ಹೋಗಿ ಅವರನ್ನು ಎಬ್ಬಿಸಲು ಪ್ರಯತ್ನಿಸಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಜಗದೀಶ್ ಪ್ರಾಣಪಕ್ಷಿ ಹಾರಿಹೋಗಿದೆ. ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ