ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲಿ ಈ ಬಾರಿ ಅನ್ನದಾತರ ಜಮೀನುಗಳಲ್ಲಿ ಮೆಕ್ಕೆಜೋಳ ಅದ್ಧೂರಿಯಾಗಿ ಬೆಳೆದು ನಿಂತಿದೆ.
ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಈ ಬಾರಿ ಮೆಕ್ಕೆಜೋಳ ಬೆಳೆಯನ್ನು ಅದ್ಧೂರಿಯಾಗಿ ಬೆಳೆಯಲಾಗಿದೆ. ಕಳೆದ ೨ ವರ್ಷಗಳಿಂದ ಹತ್ತಿ ಬೆಳೆ ರೈತರಿಗೆ ಭಾರೀ ನಷ್ಟವನ್ನು ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಎಲ್ಲಾ ರೈತರು ಮೆಕ್ಕೆಜೋಳ ಫಸಲಿನತ್ತ ಮುಖ ಮಾಡಿದ್ದಾರೆ.
ಕಡಿಮೆ ಖರ್ಚು ಮತ್ತು ಅಲ್ಪ ಮಳೆಯಾದರೆ ಸಾಕು ಮೆಕ್ಕೆಜೋಳ ಫಸಲು ಅದ್ಧೂರಿಯಾಗಿ ಬೆಳೆದು ನಿಲ್ಲಲಿದೆ. ಇದರ ಜೊತೆ ಜೊತೆಗೆ ಈ ಬಾರಿ ಮಳೆ ಕೂಡ ಉತ್ತಮವಾಗಿ ಬೀಳುತ್ತಿರುವುದರಿಂದ ಮೆಕ್ಕೆಜೋಳ ಉತ್ತಮ ಇಳುವರಿ ಕೊಡುತ್ತೆ ಎಂದು ಹೇಳಲಾಗುತ್ತಿದೆ.
ಇನ್ನೂ ಕೆಲ ರೈತರು ಹೊಗೆಸೊಪ್ಪು ಹಾಗೂ ಶುಂಠಿ ಬೆಳೆ ಬೆಳೆದಿದ್ದು, ಅವುಗಳು ಕೂಡ ಈ ಬಾರಿ ಉತ್ತಮ ಆದಾಯ ತಂದುಕೊಡಲಿವೆ ಅಂತಾ ಹೇಳಲಾಗುತ್ತಿದೆ.
ಕಳೆದ ವರ್ಷ ಮಳೆ ಕಡಿಮೆಯಾದ ಪರಿಣಾಮ ಮೆಕ್ಕೆಜೋಳ ಅಧಿಕ ಇಳುವರಿ ಕೊಟ್ಟಿರಲಿಲ್ಲ. ಆದರೆ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಮೆಕ್ಕೆ ಜೋಳ ಬೆಳೆ ರೈತರ ಬದುಕನ್ನು ಹಸನಾಗಿಸಲಿದೆ ಎಂದು ಅಂದಾಜಿಸಲಾಗಿದೆ.
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…