ಮೈಸೂರು

ಕೈ ಹಿಡಿದ ಮೆಕ್ಕೆಜೋಳ ಬೆಳೆ: ಈ ಬಾರಿ ರೈತರಿಗೆ ಉತ್ತಮ ಫಸಲಾಗೋದು ಪಕ್ಕಾ!

ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲಿ ಈ ಬಾರಿ ಅನ್ನದಾತರ ಜಮೀನುಗಳಲ್ಲಿ ಮೆಕ್ಕೆಜೋಳ ಅದ್ಧೂರಿಯಾಗಿ ಬೆಳೆದು ನಿಂತಿದೆ.

ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಈ ಬಾರಿ ಮೆಕ್ಕೆಜೋಳ ಬೆಳೆಯನ್ನು ಅದ್ಧೂರಿಯಾಗಿ ಬೆಳೆಯಲಾಗಿದೆ. ಕಳೆದ ೨ ವರ್ಷಗಳಿಂದ ಹತ್ತಿ ಬೆಳೆ ರೈತರಿಗೆ ಭಾರೀ ನಷ್ಟವನ್ನು ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಎಲ್ಲಾ ರೈತರು ಮೆಕ್ಕೆಜೋಳ ಫಸಲಿನತ್ತ ಮುಖ ಮಾಡಿದ್ದಾರೆ.

ಕಡಿಮೆ ಖರ್ಚು ಮತ್ತು ಅಲ್ಪ ಮಳೆಯಾದರೆ ಸಾಕು ಮೆಕ್ಕೆಜೋಳ ಫಸಲು ಅದ್ಧೂರಿಯಾಗಿ ಬೆಳೆದು ನಿಲ್ಲಲಿದೆ. ಇದರ ಜೊತೆ ಜೊತೆಗೆ ಈ ಬಾರಿ ಮಳೆ ಕೂಡ ಉತ್ತಮವಾಗಿ ಬೀಳುತ್ತಿರುವುದರಿಂದ ಮೆಕ್ಕೆಜೋಳ ಉತ್ತಮ ಇಳುವರಿ ಕೊಡುತ್ತೆ ಎಂದು ಹೇಳಲಾಗುತ್ತಿದೆ.

ಇನ್ನೂ ಕೆಲ ರೈತರು ಹೊಗೆಸೊಪ್ಪು ಹಾಗೂ ಶುಂಠಿ ಬೆಳೆ ಬೆಳೆದಿದ್ದು, ಅವುಗಳು ಕೂಡ ಈ ಬಾರಿ ಉತ್ತಮ ಆದಾಯ ತಂದುಕೊಡಲಿವೆ ಅಂತಾ ಹೇಳಲಾಗುತ್ತಿದೆ.

ಕಳೆದ ವರ್ಷ ಮಳೆ ಕಡಿಮೆಯಾದ ಪರಿಣಾಮ ಮೆಕ್ಕೆಜೋಳ ಅಧಿಕ ಇಳುವರಿ ಕೊಟ್ಟಿರಲಿಲ್ಲ. ಆದರೆ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಮೆಕ್ಕೆ ಜೋಳ ಬೆಳೆ ರೈತರ ಬದುಕನ್ನು ಹಸನಾಗಿಸಲಿದೆ ಎಂದು ಅಂದಾಜಿಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

44 mins ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

49 mins ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

58 mins ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

11 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

11 hours ago