ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲಿ ಈ ಬಾರಿ ಅನ್ನದಾತರ ಜಮೀನುಗಳಲ್ಲಿ ಮೆಕ್ಕೆಜೋಳ ಅದ್ಧೂರಿಯಾಗಿ ಬೆಳೆದು ನಿಂತಿದೆ.
ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಈ ಬಾರಿ ಮೆಕ್ಕೆಜೋಳ ಬೆಳೆಯನ್ನು ಅದ್ಧೂರಿಯಾಗಿ ಬೆಳೆಯಲಾಗಿದೆ. ಕಳೆದ ೨ ವರ್ಷಗಳಿಂದ ಹತ್ತಿ ಬೆಳೆ ರೈತರಿಗೆ ಭಾರೀ ನಷ್ಟವನ್ನು ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಎಲ್ಲಾ ರೈತರು ಮೆಕ್ಕೆಜೋಳ ಫಸಲಿನತ್ತ ಮುಖ ಮಾಡಿದ್ದಾರೆ.
ಕಡಿಮೆ ಖರ್ಚು ಮತ್ತು ಅಲ್ಪ ಮಳೆಯಾದರೆ ಸಾಕು ಮೆಕ್ಕೆಜೋಳ ಫಸಲು ಅದ್ಧೂರಿಯಾಗಿ ಬೆಳೆದು ನಿಲ್ಲಲಿದೆ. ಇದರ ಜೊತೆ ಜೊತೆಗೆ ಈ ಬಾರಿ ಮಳೆ ಕೂಡ ಉತ್ತಮವಾಗಿ ಬೀಳುತ್ತಿರುವುದರಿಂದ ಮೆಕ್ಕೆಜೋಳ ಉತ್ತಮ ಇಳುವರಿ ಕೊಡುತ್ತೆ ಎಂದು ಹೇಳಲಾಗುತ್ತಿದೆ.
ಇನ್ನೂ ಕೆಲ ರೈತರು ಹೊಗೆಸೊಪ್ಪು ಹಾಗೂ ಶುಂಠಿ ಬೆಳೆ ಬೆಳೆದಿದ್ದು, ಅವುಗಳು ಕೂಡ ಈ ಬಾರಿ ಉತ್ತಮ ಆದಾಯ ತಂದುಕೊಡಲಿವೆ ಅಂತಾ ಹೇಳಲಾಗುತ್ತಿದೆ.
ಕಳೆದ ವರ್ಷ ಮಳೆ ಕಡಿಮೆಯಾದ ಪರಿಣಾಮ ಮೆಕ್ಕೆಜೋಳ ಅಧಿಕ ಇಳುವರಿ ಕೊಟ್ಟಿರಲಿಲ್ಲ. ಆದರೆ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಮೆಕ್ಕೆ ಜೋಳ ಬೆಳೆ ರೈತರ ಬದುಕನ್ನು ಹಸನಾಗಿಸಲಿದೆ ಎಂದು ಅಂದಾಜಿಸಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…