ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲಿ ಈ ಬಾರಿ ಅನ್ನದಾತರ ಜಮೀನುಗಳಲ್ಲಿ ಮೆಕ್ಕೆಜೋಳ ಅದ್ಧೂರಿಯಾಗಿ ಬೆಳೆದು ನಿಂತಿದೆ.
ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಈ ಬಾರಿ ಮೆಕ್ಕೆಜೋಳ ಬೆಳೆಯನ್ನು ಅದ್ಧೂರಿಯಾಗಿ ಬೆಳೆಯಲಾಗಿದೆ. ಕಳೆದ ೨ ವರ್ಷಗಳಿಂದ ಹತ್ತಿ ಬೆಳೆ ರೈತರಿಗೆ ಭಾರೀ ನಷ್ಟವನ್ನು ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಎಲ್ಲಾ ರೈತರು ಮೆಕ್ಕೆಜೋಳ ಫಸಲಿನತ್ತ ಮುಖ ಮಾಡಿದ್ದಾರೆ.
ಕಡಿಮೆ ಖರ್ಚು ಮತ್ತು ಅಲ್ಪ ಮಳೆಯಾದರೆ ಸಾಕು ಮೆಕ್ಕೆಜೋಳ ಫಸಲು ಅದ್ಧೂರಿಯಾಗಿ ಬೆಳೆದು ನಿಲ್ಲಲಿದೆ. ಇದರ ಜೊತೆ ಜೊತೆಗೆ ಈ ಬಾರಿ ಮಳೆ ಕೂಡ ಉತ್ತಮವಾಗಿ ಬೀಳುತ್ತಿರುವುದರಿಂದ ಮೆಕ್ಕೆಜೋಳ ಉತ್ತಮ ಇಳುವರಿ ಕೊಡುತ್ತೆ ಎಂದು ಹೇಳಲಾಗುತ್ತಿದೆ.
ಇನ್ನೂ ಕೆಲ ರೈತರು ಹೊಗೆಸೊಪ್ಪು ಹಾಗೂ ಶುಂಠಿ ಬೆಳೆ ಬೆಳೆದಿದ್ದು, ಅವುಗಳು ಕೂಡ ಈ ಬಾರಿ ಉತ್ತಮ ಆದಾಯ ತಂದುಕೊಡಲಿವೆ ಅಂತಾ ಹೇಳಲಾಗುತ್ತಿದೆ.
ಕಳೆದ ವರ್ಷ ಮಳೆ ಕಡಿಮೆಯಾದ ಪರಿಣಾಮ ಮೆಕ್ಕೆಜೋಳ ಅಧಿಕ ಇಳುವರಿ ಕೊಟ್ಟಿರಲಿಲ್ಲ. ಆದರೆ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಮೆಕ್ಕೆ ಜೋಳ ಬೆಳೆ ರೈತರ ಬದುಕನ್ನು ಹಸನಾಗಿಸಲಿದೆ ಎಂದು ಅಂದಾಜಿಸಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…