ಮೈಸೂರು

ಕೈ ಹಿಡಿದ ಮೆಕ್ಕೆಜೋಳ ಬೆಳೆ: ಈ ಬಾರಿ ರೈತರಿಗೆ ಉತ್ತಮ ಫಸಲಾಗೋದು ಪಕ್ಕಾ!

ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲಿ ಈ ಬಾರಿ ಅನ್ನದಾತರ ಜಮೀನುಗಳಲ್ಲಿ ಮೆಕ್ಕೆಜೋಳ ಅದ್ಧೂರಿಯಾಗಿ ಬೆಳೆದು ನಿಂತಿದೆ.

ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಈ ಬಾರಿ ಮೆಕ್ಕೆಜೋಳ ಬೆಳೆಯನ್ನು ಅದ್ಧೂರಿಯಾಗಿ ಬೆಳೆಯಲಾಗಿದೆ. ಕಳೆದ ೨ ವರ್ಷಗಳಿಂದ ಹತ್ತಿ ಬೆಳೆ ರೈತರಿಗೆ ಭಾರೀ ನಷ್ಟವನ್ನು ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಎಲ್ಲಾ ರೈತರು ಮೆಕ್ಕೆಜೋಳ ಫಸಲಿನತ್ತ ಮುಖ ಮಾಡಿದ್ದಾರೆ.

ಕಡಿಮೆ ಖರ್ಚು ಮತ್ತು ಅಲ್ಪ ಮಳೆಯಾದರೆ ಸಾಕು ಮೆಕ್ಕೆಜೋಳ ಫಸಲು ಅದ್ಧೂರಿಯಾಗಿ ಬೆಳೆದು ನಿಲ್ಲಲಿದೆ. ಇದರ ಜೊತೆ ಜೊತೆಗೆ ಈ ಬಾರಿ ಮಳೆ ಕೂಡ ಉತ್ತಮವಾಗಿ ಬೀಳುತ್ತಿರುವುದರಿಂದ ಮೆಕ್ಕೆಜೋಳ ಉತ್ತಮ ಇಳುವರಿ ಕೊಡುತ್ತೆ ಎಂದು ಹೇಳಲಾಗುತ್ತಿದೆ.

ಇನ್ನೂ ಕೆಲ ರೈತರು ಹೊಗೆಸೊಪ್ಪು ಹಾಗೂ ಶುಂಠಿ ಬೆಳೆ ಬೆಳೆದಿದ್ದು, ಅವುಗಳು ಕೂಡ ಈ ಬಾರಿ ಉತ್ತಮ ಆದಾಯ ತಂದುಕೊಡಲಿವೆ ಅಂತಾ ಹೇಳಲಾಗುತ್ತಿದೆ.

ಕಳೆದ ವರ್ಷ ಮಳೆ ಕಡಿಮೆಯಾದ ಪರಿಣಾಮ ಮೆಕ್ಕೆಜೋಳ ಅಧಿಕ ಇಳುವರಿ ಕೊಟ್ಟಿರಲಿಲ್ಲ. ಆದರೆ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಮೆಕ್ಕೆ ಜೋಳ ಬೆಳೆ ರೈತರ ಬದುಕನ್ನು ಹಸನಾಗಿಸಲಿದೆ ಎಂದು ಅಂದಾಜಿಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

3 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

4 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

9 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

9 hours ago