ಮೈಸೂರು : ನಗರದಲ್ಲಿ ಬುಧವಾರ ಮಧ್ಯಾಹ್ನ ಮಳೆ ಧಿಢೀರ್ ಬಂದ ಕಾರಣ ಜನ ಜೀವನ ಅಸ್ತವ್ಯಸ್ತವಾಗಿತ್ತು.
ನಗರದ ಹಲವೆಡೆ ಭಾರೀ ಮಳೆಗೆ ರಸ್ತೆಯಲ್ಲೇ ಮಳೆ ನೀರು ನಿಂತು ವಾಹನ ಸವಾರರು ಪರಾದಾಡಿದರು.
ಮಾರ್ಕೆಟ್ಗೆ ಬಂದವರ ಪರದಾಟ ;
ದೇವರಾಜ ಮಾರುಕಟ್ಟೆಗೆ ಬಂದ ಸಾರ್ವಜನಿಕರು ಪರದಾಡಿದರು, ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ಹೂವು, ಹಣ್ಣು ವ್ಯಾಪಾರಸ್ಥರು ಕಷ್ಟಕ್ಕೀಡಾಗಿದ್ದು, ಮಳೆಯಿಂದಾಗಿ ವ್ಯಾಪಾರವಿಲ್ಲದೇ ದಿಕ್ಕು ತೋಚದಂತಾಗಿದ್ದಾರೆ.
ಟ್ರಾಫಿಕ್ ಜಾಮ್ ;
ಮಳೆಯ ಪರಿಣಾಮ ದೈನಂದಿನ ಕೆಲಸ ಕಾರ್ಯಗಳಿಗೆ ಹೋಗುವವರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾಕಷ್ಟು ಪರದಾಟ ನಡೆಸಿದರು. ಕೆ.ಆರ್.ವೃತ್ತ, ಸಯ್ಯಾಜಿ ರಾವ್ ರಸ್ತೆ, ಅಗ್ರಹಾರ ವೃತ್ತ, ಸಿದ್ದಪ್ಪ ವೃತ್ತ, ಆರ್ಟಿಓ ವೃತ್ತ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ರಸ್ತೆಯಲ್ಲೇ ಮಳೆ ನೀರು ನಿಂತು ವಾಹನ ಸವಾರರು ಸಂಚರಿಸಲು ಸಾಧ್ಯವಾಗದೇ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು. ಇನ್ನೂ ಕೆಲವು ಕಡೆ ಚರಂಡಿ ನೀರು ಹಾಗೂ ಮಳೆ ನೀರು ಸೇರಿ ರಸ್ತೆಯ ಮೇಲೆಯೇ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.
ಸಾಧಾರಣ ಮಳೆ ;
ನಗರದ ವಿವಿಧ ಬಡಾವಣೆಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಸುರಿದರೆ ಕೆಲವೆಡೆ ತುಸು ಹೆಚ್ಚಾಗಿಯೇ ಸುರಿಯಿತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಯಂತೆ ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಜೂ.11ರಿಂದ 15ರವರೆಗೆ ಮೋಡ ಕವಿದ ವಾತಾವರಣ ದೊಂದಿಗೆ ತುಂತುರುವಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…