ಮೈಸೂರು

ಮೈಸೂರಲ್ಲಿ ಮಳೆಯಿಂದಾಗಿ ಅಪಾರ ಹಾನಿಯಾಗಿದೆ: ಉಸ್ತುವಾರಿ ಸಚಿವ ಎಚ್‌ಸಿಎಂ

ಮೈಸೂರು: ಹವಾಮಾನ ವೈಪರಿತ್ಯದಿಂದಾಗಿ ರಾಜ್ಯಾದ್ಯಂತ ಭಾರೀ ಮಳೆ ಸುರಿದಿದೆ. ಅದರಲ್ಲೂ ಕೊಡಗು, ಮೈಸೂರು, ಚಾಮರಾಜಗರ ಜಿಲ್ಲೆಗಳಲ್ಲಿ ಮುಂಗಾರು ನಿರೀಕ್ಷೆಗೂ ಮೀರಿ ಉತ್ತಮ ಮಳೆ ನೀಡುವ ಮುನ್ಸೂಚನೆ ನೀಡಿದೆ.

ಇದರ ಜೊತೆಗೆ ಮೈಸೂರಿನಲ್ಲಿ ವಿಪರೀತ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದ್ದು, ಈ ಬಗ್ಗೆ ನಗರದಲ್ಲಿಂದು (ಶುಕ್ರವಾರ, ಮೇ.24) ಮಳೆ ಸಂಬಂಧ ಮಾಧ್ಯಮಗಳ ಜತೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಮಾತನಾಡಿದ್ದಾರೆ.

ಮಳೆಯಿಂದಾಗಿ ಮೈಸೂರಿನ ಹಲವು ಭಾಗಗಳಲ್ಲಿ ಅಪಾರ ಹಾನಿಯಾಗಿದೆ. ತೋಟಗಾರಿಕೆ ಕೃಷಿಯಲ್ಲಿ ಈವರೆಗೆ ಸುಮಾರು 6900 ಎಕ್ಟೇರ್‌ ನಷ್ಟು ಹಾನಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮೈಸೂರಲ್ಲಿ 4 ಸಾವಿರ ಎಕ್ಟೇರ್‌ ಹಾನಿಯಾಗಿದೆ. ಅದರಲ್ಲಿ 6 ಮನೆಗಳು ಭಾಗಶಃ ನಾಶವಾಗಿದೆ. ಉಳಿದಂತೆ 60 ಗೋಡೆಗಳು ಕುಸಿದಿವೆ. ಮನೆ ಸಂಪೂರ್ಣವಾಗಿ ಬಿದ್ದು ಹೋಗಿರುವುದಕ್ಕೆ 50 ಸಾವಿರ ರೂ. ಪರಿಹಾರ ನೀಡಲಾಗಿದೆ. ಇನ್ನು ಗೋಡೆ ಕುಸಿತ ಉಂಟಾಗಿರುವುದಕ್ಕೆ 25 ಸಾವಿರ ರೂ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

ಇನ್ನು ಮಾಜಿ ಮುಖ್ಯಮಂತ್ರಿ ಅವರಿಗೆ ಪರೋಕ್ಷವಾಗಿ ತಿವಿದಿರುವ ಎಚ್‌.ಸಿ ಮಹದೇವಪ್ಪ. ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಠಿ ಬಗ್ಗೆ ಬೇಕಿದ್ದರೆ ಅವರು ಮಾತನಾಡಲಿ, ಅದು ಬಿಟ್ಟು ರಾಜಕೀಯಕ್ಕಾಗಿ ವಿಚಾರ ಮಾಡಲು ಮುಂದಾದರೇ ನನ್ನ ಬಳಿ ಉತ್ತರವಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

8 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

8 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

8 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

8 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

8 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 hours ago