ಮೈಸೂರು

ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಾದ್ಯಂತ ವರ್ಷದ ಮೊದಲ ವರ್ಷಧಾರೆ

ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ.

ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ.

ಕಳೆದ ಫೆಬ್ರವರಿ ತಿಂಗಳಿನಿಂದಲೂ ಉಷ್ಣಾಂಶ ಭಾರೀ ಏರಿಕೆಯಾಗಿದ್ದು, ಜನರು ತಣ್ಣನೆಯ ವಾತಾವರಣಕ್ಕಾಗಿ ಕಾದು ಕುಳಿತಿದ್ದರು. ಇಂದು ಸಂಜೆ ಇದ್ದಕ್ಕಿದ್ದಂತೆ ಧಾರಾಕಾರ ಮಳೆ ಸುರಿದಿದ್ದು, ಅನ್ನದಾತರ ಮೊಗದಲ್ಲಿ ಸಂತಸ ಮನೆ ಮಾಡಿದೆ.

ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಭಾರೀ ಮಳೆಯಿಂದ ವಿದ್ಯುತ್‌ ಸಂಪರ್ಕ ಕಡಿತವಾಗಿದ್ದು, ಜನರು ಕಗತ್ತಿನಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮಳೆಯಾದರೂ ಉಷ್ಣಾಂಶದಲ್ಲಿ ಯಾವುದೇ ರೀತಿಯಲ್ಲೂ ಇಳಿಕೆಯಾಗುವುದಿಲ್ಲ. ಮುಂದಿನ ಮೇ ತಿಂಗಳವರೆಗೂ ಉಷ್ಣಾಂಶ ಹೀಗೆಯೇ ಇರಲಿದೆ ಎಂದು ಹೇಳಿದೆ.

ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೂ ವೃದ್ಧರು ಹಾಗೂ ಮಕ್ಕಳು ಮನೆಯಿಂದ ಹೊರಗೆ ಬರಬಾರದು ಎಂದು ಸೂಚನೆ ನೀಡಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

7 mins ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

33 mins ago

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

1 hour ago

ಓದುಗರ ಪತ್ರ: ಐಪಿಎಲ್ ಟಿಕೆಟ್‌ಗೆ ಗೋಗರೆಯುತ್ತಿರುವ ಶಾಸಕರು

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…

1 hour ago

ಓದುಗರ ಪತ್ರ: ಹಿಂದಿ ಭಾಷೆ ಬಗ್ಗೆ ತಾತ್ಸಾರ ಸಲ್ಲದು

ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…

1 hour ago

ಓದುಗರ ಪತ್ರ: ಶಾಸಕ ದರ್ಶನ್ ಮಾದರಿ ನಡೆ

ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…

2 hours ago