ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ.
ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ.
ಕಳೆದ ಫೆಬ್ರವರಿ ತಿಂಗಳಿನಿಂದಲೂ ಉಷ್ಣಾಂಶ ಭಾರೀ ಏರಿಕೆಯಾಗಿದ್ದು, ಜನರು ತಣ್ಣನೆಯ ವಾತಾವರಣಕ್ಕಾಗಿ ಕಾದು ಕುಳಿತಿದ್ದರು. ಇಂದು ಸಂಜೆ ಇದ್ದಕ್ಕಿದ್ದಂತೆ ಧಾರಾಕಾರ ಮಳೆ ಸುರಿದಿದ್ದು, ಅನ್ನದಾತರ ಮೊಗದಲ್ಲಿ ಸಂತಸ ಮನೆ ಮಾಡಿದೆ.
ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಭಾರೀ ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಜನರು ಕಗತ್ತಿನಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮಳೆಯಾದರೂ ಉಷ್ಣಾಂಶದಲ್ಲಿ ಯಾವುದೇ ರೀತಿಯಲ್ಲೂ ಇಳಿಕೆಯಾಗುವುದಿಲ್ಲ. ಮುಂದಿನ ಮೇ ತಿಂಗಳವರೆಗೂ ಉಷ್ಣಾಂಶ ಹೀಗೆಯೇ ಇರಲಿದೆ ಎಂದು ಹೇಳಿದೆ.
ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೂ ವೃದ್ಧರು ಹಾಗೂ ಮಕ್ಕಳು ಮನೆಯಿಂದ ಹೊರಗೆ ಬರಬಾರದು ಎಂದು ಸೂಚನೆ ನೀಡಿದೆ.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…