ಮೈಸೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಭಾಗದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ.
ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಜೊತೆಗೆ ಹೊರಹರಿವಿನಲ್ಲಿ ಭಾರೀ ಏರಿಕೆ ಆಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಅನೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.
ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವು 2000 ಕ್ಯೂಸೆಕ್ಸ್ ಹೆಚ್ಚಳವಾಗಿದ್ದು, ಹೊರಹರಿವನ್ನು 1000 ಕ್ಯೂಸೆಕ್ಸ್ಗೆ ಹೆಚ್ಚಳ ಮಾಡಲಾಗಿದೆ.
ಇನ್ನೂ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್ ಜಲಾಶಯದ ಹೊರಹರಿವಿನ ಪ್ರಮಾಣದಲ್ಲೂ ಏರಿಕೆ ಮಾಡಲಾಗಿದೆ. ಸದ್ಯದ ಒಳಹರಿವು 1279 ಕ್ಯೂಸೆಕ್ಸ್ಗಳಾಗಿದ್ದು, ಜಲಾಶಯದ ಹೊರಹರಿವನ್ನು 984 ಕ್ಯೂಸೆಕ್ಸ್ಗಳಿಗೆ ಏರಿಕೆ ಮಾಡಲಾಗಿದೆ.
ರಾಜ್ಯದಲ್ಲಿ ಮಳೆ ಹೀಗೆಯೇ ಮುಂದುವರಿದರೆ ಎರಡೂ ಜಲಾಶಯಗಳು ಭರ್ತಿಯಾಗಲಿದ್ದು, ಜಲಾಶಯದಿಂದ ಹೊರಹರಿವನ್ನೂ ಕೂಡ ಜಾಸ್ತಿ ಮಾಡಲಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಜಲಾಶಯಗಳು ಭರ್ತಿಯತ್ತ ಸಾಗುತ್ತಿರುವುದರಿಂದ ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದ್ದು, ಈ ಬಾರಿಯಾದರೂ ನಾಲೆಗಳ ನೀರನ್ನು ನಂಬಿ ಹೆಚ್ಚು ಹೆಚ್ಚು ಬೆಳೆ ಬೆಳೆಯಬಹುದು ಎಂದು ಅಂದಾಜಿಸಿದ್ದಾರೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…