ಮೈಸೂರು

ಕಬಿನಿ ಜಲಾಶಯ ಬಹುತೇಕ ಭರ್ತಿ: ರೈತರಲ್ಲಿ ಮನೆ ಮಾಡಿದ ಸಂತಸ

ಹೆಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಕಬಿನಿ ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದೆ.

ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದ್ದು, ಇದೀಗ ಜಲಾಶಯ ಸಂಪೂರ್ಣ ಭರ್ತಿಯಾಗಲು ಕೇವಲ 5 ಅಡಿಗಳಷ್ಟು ಮಾತ್ರ ಬಾಕಿಯಿದೆ. ಜಲಾಶಯ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ.

ಪ್ರಸ್ತುತ ಜಲಾಶಯದ ನೀರಿನ ಮಟ್ಟ 79.54 ಅಡಿಗಳಿದ್ದು, ಪೂರ್ಣ ಜಲಾಶಯದ ಮಟ್ಟ 84 ಅಡಿಗಳಾಗಿದೆ. ಮುಂದಿನ ವಾರ ಜಲಾಶಯ ಸಂಪೂರ್ಣ ಭರ್ತಿಯಾಗುವ ನಿರೀಕ್ಷೆಗಳಿವೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನೂ ಕೇರಳ ಮತ್ತು ಕರ್ನಾಟಕದ ಗಡಿ ಭಾಗಗಳಲ್ಲಿ ಮುಂಗಾರು ಸಕ್ರಿಯವಾಗಿದ್ದು, ಇದರ ಪರಿಣಾಮ ಕಬಿನಿ ಜಲಾಶಯದ ನೀರಿನ ಮಟ್ಟ ನಿರಂತರ ಹೆಚ್ಚಳವಾಗುತ್ತಿದೆ. ಕಬಿನಿ ರೈತರ ಜೀವನಾಡಿಯಾಗಿದ್ದು, ಜಲಾಶಯ ಭರ್ತಿಯಾಗುತ್ತಿರುವುದು ರೈತರಿಗೆ ಸಂತಸ ತಂದಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

4 mins ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

1 hour ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

2 hours ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

3 hours ago